ಶೋಭಾ ಕರಂದ್ಲಾಜೆ TNIE
ರಾಜಕೀಯ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ; ಸಿಎಂ ಆದ ಮೇಲೆ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ: ಶೋಭಾ ಕರಂದ್ಲಾಜೆ

ಆರ್.ಅಶೋಕ್ ಮತ್ತು ನಾನು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿಯ ಸಂಸದರು ಮತ್ತು ಶಾಸಕರ ಮೇಲೆ ಎಫ್‍ಐಆರ್‌ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಪಕ್ಷದ ನಾಯಕ ಹಾಗೂ ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್​​ಶೀಟ್​​ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು. ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು ಪೊಲೀಸ್ ವ್ಯಾನಿನಲ್ಲಿ ಕರೆದುಕೊಂಡು ಹೋಗಿ ವಿಸರ್ಜನೆ ಮಾಡುವ ಘಟನೆ ನಡೆದಿದೆ. ಯಾಕಾಗಿ ಹೀಗಾಗಿದೆ? ಎಂದು ಪ್ರಶ್ನಿಸಿದರು.

ಆರ್.ಅಶೋಕ್ ಮತ್ತು ನಾನು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ. ಇವತ್ತು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದಕ್ಕಾಗಿ ಪ್ರಜಾತಂತ್ರವನ್ನು ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಎಫ್ಐಆರ್ ಹಾಕಿದೆ, ಅದನ್ನು ನಾವು ಎದುರಿಸುತ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗುತ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ. ನಾವು ಗೊಡ್ಡು ಬೆದರಿಕೆಗೆ ಹೆದರಿಕೊಂಡು ಓಡಿ ಹೋಗಲ್ಲ. ಇದನ್ನೆಲ್ಲಾ ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಶೋಭಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್