ನಾಗಮಂಗಲದ ಗಲಭೆ ಕುರಿತ ಬಿಜೆಪಿ ಸತ್ಯಶೋಧನಾ ಸಮಿತಿ ಶುಕ್ರವಾರ ಬೆಂಗಳೂರಿನಲ್ಲಿ ತನ್ನ ವರದಿಯನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಿದೆ. 
ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತಷ್ಟು ಗಲಭೆಗಳು ಎದುರಾಗಲಿವೆ, ನಾಗಮಂಗಲ PFI ಸ್ಪಾಟ್ ಆಗುತ್ತಿದೆ: BJP ಆರೋಪ

ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಗಣೇಶ ಹಬ್ಬದ ಸಂದರ್ಭದಲ್ಲಿ ಇಂತಹ ಯಾವುದೇ ಘರ್ಷಣೆಗಳನ್ನು ನಡೆದಿರಲಿಲ್ಲ. ಆದರೆ, ಈ ವರ್ಷದ ಗಣೇಶ ಮೆರವಣಿಗೆ ವೇಳೆ 8 ರಿಂದ 10 ಘರ್ಷಣೆಗಳು ನಡೆದಿವೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಮತ್ತಷ್ಟು ಗಲಭೆಗಳು ಎದುರಾಗಲಿದೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.

ನಾಗಮಂಗಲ ಹಿಂಸಾಚಾರದ ಘಟನೆ ಕುರಿತ ಬಿಜೆಪಿ ಸತ್ಯಶೋಧನಾ ಸಮಿತಿಯ ಮುಖ್ಯಸ್ಥರಾಗಿರುವ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಮತ್ತು ಇತರ ಸದಸ್ಯರು ತಮ್ಮ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಗಣೇಶ ಹಬ್ಬದ ಸಂದರ್ಭದಲ್ಲಿ ಇಂತಹ ಯಾವುದೇ ಘರ್ಷಣೆಗಳನ್ನು ನಡೆದಿರಲಿಲ್ಲ. ಆದರೆ, ಈ ವರ್ಷದ ಗಣೇಶ ಮೆರವಣಿಗೆ ವೇಳೆ 8 ರಿಂದ 10 ಘರ್ಷಣೆಗಳು ನಡೆದಿವೆ ಎಂದು ಹೇಳಿದರು.

ಕಳೆದ ವರ್ಷ ನಾಗಮಂಗಲದಲ್ಲಿ ಇಂತಹುದೇ ಘಟನೆ ನಡೆದಿದ್ದು, ಅದನ್ನು ಮುಚ್ಚಿ ಹಾಕಲಾಗಿತ್ತು. ನಾಗಮಂಗಲದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಕ್ರಿಯವಾಗಿದ್ದು, ನಾಗಮಂಗಲ ಪಿಎಫ್ಐ ಸ್ಪಾಟ್ ಆಗುತ್ತಿದೆ ಎಂದು ತಿಳಿಸಿದರು.

ಒಂದು ಸಮುದಾಯದ ಓಲೈಕೆಯೇ ಇತ್ತೀಚಿನ ಘರ್ಷಣೆಗೆ ಕಾರಣವಾಗಿದೆ. ಜೊತೆಗೆ ಪೊಲೀಸರ ವೈಫಲ್ಯವೂ ಇದೆ ಎಂದು ಆರೋಪಿಸಿದರು.

ಪೊಲೀಸರನ್ನು ಸರ್ಕಾರ ಅಶಕ್ತರನ್ನಾಗಿ ಮಾಡಿದೆ. ಹೀಗಾಗಿಯೇ ಅವರು ಯಾವುದೇ ಕ್ರಮ ಕೈಕಗೊಂಡಿಲ್ಲ. ಕಳೆದ ಬಾರಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕೋಮುವಾದಿ ಶಕ್ತಿಗಳಿಗೆ ಉತ್ತೇಜನ ನೀಡಿದಂತಾಗಿದೆ. ಇತ್ತೀಚೆಗೆ ನಡೆದ ನಾಗಮಂಗಲದ ದಂಗೆ ಪೂರ್ವ ಯೋಜಿತ ಕೃತ್ಯವಾಗಿದೆ. ಆರೋಪಿಗಳು ಮುಖವಾಡಗಳನ್ನು ಧರಿಸಿ, ಪೆಟ್ರೋಲ್ ಬಾಂಬ್ ಗಳನ್ನು ಸಿದ್ಧವಾಗಿ ಇಟ್ಟುಕೊಂಡಿದ್ದರು. ದಾಳಿ ವೇಳೆ ಕೆಲವು ಅಂಗಡಿಗಳನ್ನು ಗುರಿಯಾಗಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT