ನಾಗಮಂಗಲದ ಗಲಭೆ ಕುರಿತ ಬಿಜೆಪಿ ಸತ್ಯಶೋಧನಾ ಸಮಿತಿ ಶುಕ್ರವಾರ ಬೆಂಗಳೂರಿನಲ್ಲಿ ತನ್ನ ವರದಿಯನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಿದೆ. 
ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತಷ್ಟು ಗಲಭೆಗಳು ಎದುರಾಗಲಿವೆ, ನಾಗಮಂಗಲ PFI ಸ್ಪಾಟ್ ಆಗುತ್ತಿದೆ: BJP ಆರೋಪ

ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಗಣೇಶ ಹಬ್ಬದ ಸಂದರ್ಭದಲ್ಲಿ ಇಂತಹ ಯಾವುದೇ ಘರ್ಷಣೆಗಳನ್ನು ನಡೆದಿರಲಿಲ್ಲ. ಆದರೆ, ಈ ವರ್ಷದ ಗಣೇಶ ಮೆರವಣಿಗೆ ವೇಳೆ 8 ರಿಂದ 10 ಘರ್ಷಣೆಗಳು ನಡೆದಿವೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಮತ್ತಷ್ಟು ಗಲಭೆಗಳು ಎದುರಾಗಲಿದೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.

ನಾಗಮಂಗಲ ಹಿಂಸಾಚಾರದ ಘಟನೆ ಕುರಿತ ಬಿಜೆಪಿ ಸತ್ಯಶೋಧನಾ ಸಮಿತಿಯ ಮುಖ್ಯಸ್ಥರಾಗಿರುವ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಮತ್ತು ಇತರ ಸದಸ್ಯರು ತಮ್ಮ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಗಣೇಶ ಹಬ್ಬದ ಸಂದರ್ಭದಲ್ಲಿ ಇಂತಹ ಯಾವುದೇ ಘರ್ಷಣೆಗಳನ್ನು ನಡೆದಿರಲಿಲ್ಲ. ಆದರೆ, ಈ ವರ್ಷದ ಗಣೇಶ ಮೆರವಣಿಗೆ ವೇಳೆ 8 ರಿಂದ 10 ಘರ್ಷಣೆಗಳು ನಡೆದಿವೆ ಎಂದು ಹೇಳಿದರು.

ಕಳೆದ ವರ್ಷ ನಾಗಮಂಗಲದಲ್ಲಿ ಇಂತಹುದೇ ಘಟನೆ ನಡೆದಿದ್ದು, ಅದನ್ನು ಮುಚ್ಚಿ ಹಾಕಲಾಗಿತ್ತು. ನಾಗಮಂಗಲದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಕ್ರಿಯವಾಗಿದ್ದು, ನಾಗಮಂಗಲ ಪಿಎಫ್ಐ ಸ್ಪಾಟ್ ಆಗುತ್ತಿದೆ ಎಂದು ತಿಳಿಸಿದರು.

ಒಂದು ಸಮುದಾಯದ ಓಲೈಕೆಯೇ ಇತ್ತೀಚಿನ ಘರ್ಷಣೆಗೆ ಕಾರಣವಾಗಿದೆ. ಜೊತೆಗೆ ಪೊಲೀಸರ ವೈಫಲ್ಯವೂ ಇದೆ ಎಂದು ಆರೋಪಿಸಿದರು.

ಪೊಲೀಸರನ್ನು ಸರ್ಕಾರ ಅಶಕ್ತರನ್ನಾಗಿ ಮಾಡಿದೆ. ಹೀಗಾಗಿಯೇ ಅವರು ಯಾವುದೇ ಕ್ರಮ ಕೈಕಗೊಂಡಿಲ್ಲ. ಕಳೆದ ಬಾರಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕೋಮುವಾದಿ ಶಕ್ತಿಗಳಿಗೆ ಉತ್ತೇಜನ ನೀಡಿದಂತಾಗಿದೆ. ಇತ್ತೀಚೆಗೆ ನಡೆದ ನಾಗಮಂಗಲದ ದಂಗೆ ಪೂರ್ವ ಯೋಜಿತ ಕೃತ್ಯವಾಗಿದೆ. ಆರೋಪಿಗಳು ಮುಖವಾಡಗಳನ್ನು ಧರಿಸಿ, ಪೆಟ್ರೋಲ್ ಬಾಂಬ್ ಗಳನ್ನು ಸಿದ್ಧವಾಗಿ ಇಟ್ಟುಕೊಂಡಿದ್ದರು. ದಾಳಿ ವೇಳೆ ಕೆಲವು ಅಂಗಡಿಗಳನ್ನು ಗುರಿಯಾಗಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT