ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜಕೀಯ

'ಅವರು ಏನ್ ಮಾತಾಡ್ತಿದ್ದಾರೆ ಅಂತ ಅವರಿಗೇ ಗೊತ್ತಿಲ್ಲ': ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಕುರಿತು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಹಿಂದೆ ಬಿದ್ದಿದ್ದಾರೆ. ಇಡೀ ಕ್ರೆಡಿಟ್ ಶ್ರೀನಿವಾಸ್‌ಗೆ ಹೋಗಬೇಕು.

ನೆಲಮಂಗಲ: ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಎಂ.ಚಂದ್ರಶೇಖರ್ ಕುರಿತು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಟೀಕಿಸಿದರು.

ಕೆಪಿಸಿಸಿಯಿಂದ ಚಂದ್ರಶೇಖರ್ ಪತ್ರ ಸ್ವೀಕರಿಸಿದ್ದಾರೆ ಎಂಬ ಕುಮಾರಸ್ವಾಮಿ ಆರೋಪ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಅವರು ಏನ್ ಮಾತಾಡ್ತಿದ್ದಾರೆ ಅಂತ ಅವರಿಗೇ ಗೊತ್ತಿಲ್ಲ.ಕೆಪಿಸಿಸಿಗೂ ಚಂದ್ರಶೇಖರ್ ಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.

ನಾನು ಬೆಂಗಳೂರಿನಲ್ಲಿ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕೆಲಸ ಮಾಡಿಕೊಂಡು ಇದ್ದೆ. ಕುಮಾರಸ್ವಾಮಿಗೆ ಕೆಪಿಸಿಸಿ ನೆನಪಾದರೆ ನಾನು ಏನು ಹೇಳಲಿ ಎಂದರು.

ಕಾಂಗ್ರೆಸ್ ಸರ್ಕಾರದ ಏಳು ಸಚಿವರು ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಕ್ಕೆ ತಮ್ಮ ಬಳಿ ದಾಖಲೆಗಳಿವೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ‘ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ನಾನು ಚಂದ್ರಶೇಖರ್ ಅವರನ್ನು ನೋಡಿಲ್ಲ, ಭೇಟಿಯೂ ಆಗಿಲ್ಲ ಇಲ್ಲ, ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಮುಡಾ ಹಗರಣ ಕುರಿತು ಶನಿವಾರ ಟೀಕಿಸಿದ ಕುಮಾರಸ್ವಾಮಿ, ವಿರೋಧಿಗಳ ವಿರುದ್ಧ ಎಫ್ ಐಆರ್ ದಾಖಲಿಸುತ್ತಾ, ಅವರನ್ನು ಬಂಧಿಸುವ ಅನೈತಿಕತೆಯಲ್ಲಿ ಆಡಳಿತ ತೊಡಗಿದೆ ನನ್ನನ್ನು ಸಿಲುಕಿಸಲು ರಾಜ್ಯ ಸರ್ಕಾರ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದರು.

ಗೃಹ ಸಚಿವರು ಸೇರಿದಂತೆ ಸರ್ಕಾರ ನನ್ನ ವಿರುದ್ಧ ಪಿತೂರಿ ನಡೆಸುತ್ತಿದೆ. ಅವರು ಉನ್ನತ ಪೊಲೀಸರು ಮತ್ತು ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಸೋಲೂರನ್ನು ಮಾಗಡಿ ತಾಲೂಕಿನಿಂದ ಬೇರ್ಪಡಿಸಿ ನೆಲಮಂಗಲ ತಾಲೂಕಿಗೆ ಸೇರಿಸುವ ಕುರಿತು ಬಿಜೆಪಿ ಸಂಸದ ಸುಧಾಕರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಕುರಿತು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಹಿಂದೆ ಬಿದ್ದಿದ್ದಾರೆ. ಇಡೀ ಕ್ರೆಡಿಟ್ ಶ್ರೀನಿವಾಸ್‌ಗೆ ಹೋಗಬೇಕು. ಸುಧಾಕರ್ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ಕ್ರೆಡಿಟ್ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ. ನೆಲಮಂಗಲದ ಯಾವುದೇ ಅಭಿವೃದ್ಧಿಯ ಕ್ರೆಡಿಟ್ ಶಾಸಕ ಶ್ರೀನಿವಾಸ್ ಗೆ ಸಲ್ಲಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ