ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಕಾಂಗ್ರೆಸ್- ಬಿಜೆಪಿ ಷಡ್ಯಂತ್ರ: 'ಆಪರೇಷನ್' ಗಾಗಿ 1200 ಕೋಟಿ ಮೀಸಲು; ಯತ್ನಾಳ್

ಈ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ.

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ರೂಪಿಸಲಾಗಿದೆ, ಇದಕ್ಕಾಗಿ 1,200 ಕೋಟಿ ರೂ. ಹಣ ಮೀಸಲ ಇಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ , "ಈ ಸಂಚಿನ ಬಗ್ಗೆ ನನಗೆ ಮಾಹಿತಿ ಇದೆ" ಎಂದು ಯತ್ನಾಳ್ ಹೇಳಿದರು. ಕೆಲವರು ಆಪರೇಷನ್‌ಗೆ ಹಣವನ್ನೂ ಇಟ್ಟುಕೊಂಡು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲು ಪಾಲಾಗಬಹುದು. ಮುಡಾ ಘಟನೆ ಬಂದಾಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಹೈಕೋರ್ಟ್‌ಗೆ ಹೋಗಿ ಸಿದ್ದರಾಮಯ್ಯ ತಮ್ಮ ಇಮೇಜ್ ಕಳೆದುಕೊಂಡಿದ್ದಾರೆ. ಅವರು ಹೈಕೋರ್ಟ್‌ಗೆ ಹೋಗದೇ ಇದ್ದಿದ್ದರೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಖಾತರಿಗೆ ಹಣ ಹೊಂದಿಸಬೇಕಾಗಿರುವುದಿಂದ ಸಿಬ್ಬಂದಿಗೆ ವೇತನ ನೀಡಲು ಕಷ್ಟವಾಗುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸರ್ಕಾರವನ್ನು ಬೀಳಿಸಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದನ್ನು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ. ಮುಡಾ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ನಮಗೆ ದಾಖಲೆಗಳನ್ನು ನೀಡಿದ್ದರು ಮತ್ತು ನಾವು ಮಾತನಾಡಿದ್ದೇವೆ. ಈ ಹೋರಾಟಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ' ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಈಗಾಗಲೇ ಭ್ರಷ್ಟವಾಗಿದೆ, ಹಾಗಾಗಿ ಅಧಿಕಾರದಲ್ಲಿ ಮುಂದುವರಿಯಬಾರದು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುತ್ತಾರೆ ಎಂದು ಭಾವಿಸಲಾಗಿತ್ತು. ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವವರೇ ಖರ್ಗೆ ಅವರನ್ನು ಸಿಎಂ ಮಾಡುವ ಷಡ್ಯಂತ್ರದ ಹಿಂದೆ ಇದ್ದಾರೆ ಎಂದು ಆರೋಪಿಸಿದರು. ಪಕ್ಷ ಉಳಿಸಲು ಪ್ರಯತ್ನ ಮಾಡುತ್ತಿರುವ ನಾವು ಭಿನ್ನಮತಿಯರಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಮುಂದಿನ ಡಿಸೆಂಬರ್ ವರೆಗೂ ಕಾದು ನೋಡುತ್ತೇವೆ. ಆ ಬಳಿಕ ಪಕ್ಷದ ತೀರ್ಮಾನ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಬಸವನಗೌಡ ಪಾಟೀಲ ಯತ್ನಾಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ನಾವು ಪಟ್ಟು ಹಿಡಿದಿಲ್ಲ. ಪಕ್ಷದ ವೇದಿಕೆಯಲ್ಲಿ ಕೆಲ ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ಪಡೆದಿದೆ. ವಿಜಯೇಂದ್ರ ಕುರಿತು ಬಹಿರಂಗವಾಗಿ ಮಾತನಾಡದಂತೆ ಪಕ್ಷ ಸೂಚನೆ ನೀಡಿದೆ. ಹೀಗಾಗಿ ಏನನ್ನೂ ನಾನು ಮಾತನಾಡುವುದಿಲ್ಲ’ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT