ಮಹೇಶ್ ಕುಮಟಳ್ಳಿ 
ರಾಜಕೀಯ

ಯತ್ನಾಳ್ ಉಚ್ಚಾಟನೆ: ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನ

ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ.

ಅಥಣಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಣೆ ಮಾಡಿರುವ ಬಿಜೆಪಿ ನಡೆಗೆ ಮಾಜಿ ಶಾಸಕ ಮಹೇಶ್ ಕುಮಟಳ್ಳಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರನ್ನು ಉಚ್ಚಾಟಿಸಿರುವುದು ಬಿಜೆಪಿ ಮೇಲೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಯತ್ನಾಳ್ ಅವರಿಗೆ ಸಾಕಷ್ಟು ಬೆಂಬಲವಿದೆ, ಅವರಂತಹ ಬಲಿಷ್ಠ ನಾಯಕನನ್ನು ಹೊರಹಾಕುವುದರಿಂದ ಪಂಚಮಸಾಲಿ ಸಮುದಾಯವನ್ನು ಮಾತ್ರವಲ್ಲದೆ ಇತರ ಸಮುದಾಯಗಳ ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ, ಆದರೆ, ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳು ಶೀಘ್ರದಲ್ಲೇ ಬಗೆಹರಿಯುತ್ತವೆ. 2028 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ನಾಯಕರು ಒಂದಾಗುತ್ತಾರೆ ಎಂಬ ವಿಶ್ವಾಸವಿದೆ. ಯತ್ನಾಳ್ ಬಿಜೆಪಿಯ ಪ್ರಮುಖ ತತ್ವಗಳನ್ನು ಅನುಸರಿಸುತ್ತಿದ್ದು, ರಾಷ್ಟ್ರೀಯ ನಾಯಕರು ತಮ್ಮ ತೀರ್ಪು ನೀಡಿದ್ದರೂ, ಮರುಪರಿಶೀಲಿಸಿ ಮತ್ತೊಂದು ಅವಕಾಶ ನೀಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT