ಬಿ.ವೈ.ವಿಜಯೇಂದ್ರ 
ರಾಜಕೀಯ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು!

ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಲೆ ಏರಿಕೆ, ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಹಣ ವರ್ಗಾವಣೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ.

ಈ ಪ್ರಮುಖ ಮೂರು ವಿಚಾರಗಳನ್ನು ಜನರಿಗೆ ತಲುಪಿಸಲಾಗುವುದು, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.

ಏಪ್ರಿಲ್ 7 ರಿಂದ 'ಜನಾಕ್ರೋಶ ಯಾತ್ರೆ' ಆಯೋಜಿಸಲಾಗಿದೆ. ಈ ಯಾತ್ರೆಗೆ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಲಿದ್ದಾರೆ.

ಮಾರ್ಚ್ 7ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ, ಏಪ್ರಿಲ್ 8 ಮಂಡ್ಯ ಮತ್ತು ಹಾಸನ ಏಪ್ರಿಲ್ 9 ರಂದು ಕೊಡಗು ಮತ್ತು ಮಂಗಳೂರು ಮತ್ತು ಏಪ್ರಿಲ್ 10 ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಮೊದಲ ಹಂತ ಮುಗಿಯಲಿದೆ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಎರಡನೇ ಹಂತದಲ್ಲಿ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಹೋರಾಟ ನಡೆಯಲಿದ್ದು, ಪ್ರತಿಜಿಲ್ಲೆಯಲ್ಲಿ ಎರಡರಿಂದ ಮೂರು ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!