ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ವಿನಯ್'ಗೆ ಕಾನೂನು ನೆರವು ನೀಡದೆ ಈಗ Twitterನಲ್ಲಿ ಆರ್ಭಟಿಸುತ್ತಿರುವುದು ನಿಮ್ಮ ಆದ್ಯತೆ ತೋರಿಸುತ್ತದೆ: BJP ಕುರಿತು ಯತ್ನಾಳ್ ವ್ಯಂಗ್ಯ

ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ.

ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್'ಗೆ ಕಾನೂನು ನೆರವು ನೀಡದೆ ಈಗ ಟ್ವಿಟರ್ ನಲ್ಲಿ ಆರ್ಭಟಿಸುತ್ತಿರುವುದನ್ನು ನೋಡಿದರೆ, ನಿಮ್ಮ ಆದ್ಯತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಅವರು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ.

ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು. ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT