ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ವಿನಯ್'ಗೆ ಕಾನೂನು ನೆರವು ನೀಡದೆ ಈಗ Twitterನಲ್ಲಿ ಆರ್ಭಟಿಸುತ್ತಿರುವುದು ನಿಮ್ಮ ಆದ್ಯತೆ ತೋರಿಸುತ್ತದೆ: BJP ಕುರಿತು ಯತ್ನಾಳ್ ವ್ಯಂಗ್ಯ

ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ.

ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್'ಗೆ ಕಾನೂನು ನೆರವು ನೀಡದೆ ಈಗ ಟ್ವಿಟರ್ ನಲ್ಲಿ ಆರ್ಭಟಿಸುತ್ತಿರುವುದನ್ನು ನೋಡಿದರೆ, ನಿಮ್ಮ ಆದ್ಯತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಅವರು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ.

ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು. ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT