ಬಸನಗೌಡ ಪಾಟೀಲ್ ಯತ್ನಾಳ್- ಕುಮಾರ್ ಬಂಗಾರಪ್ಪ  online desk
ರಾಜಕೀಯ

"ಅವರು" ಹೊಸ ಪಕ್ಷ ಕಟ್ಟಿದರೆ ಹೋಗುವುದಿಲ್ಲ, ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಯತ್ನಾಳ್ ಗೆ ಕೈ ಕೊಟ್ಟ ಬೆಂಬಲಿಗರು!

ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಬಿಜೆಪಿಯಿಂದ ಉಚ್ಚಾಟಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯದಶಮಿ ವೇಳೆಗೆ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಆಲೋಚನೆಯಲ್ಲಿದ್ದಾರೆ.

ಇತ್ತ ಅವರು ಬಿಜೆಪಿಯಲ್ಲಿರುವಾಗ ಅವರೊಂದಿಗೆ ಗುರುತಿಸಿಕೊಂಡಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆಯ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT