ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

KPCC ಅಧ್ಯಕ್ಷರ ಆಯ್ಕೆ ಮಾನದಂಡಗಳ ಬಗ್ಗೆ ನನಗೆ ತಿಳಿದಿಲ್ಲ; ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿಲ್ಲ: ಸತೀಶ್ ಜಾರಕಿಹೊಳಿ

ಮಾಧ್ಯಮ ವರದಿಗಳು ನನ್ನ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳನ್ನು ಹರಿಯಬಿಡುತ್ತಿವೆ. ಆದರೆ ಹಿರಿಯ ನಾಯಕರ ನಡುವಿನ ಯಾವುದೇ ಆಂತರಿಕ ಚರ್ಚೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗಾಗಿ ಯಾವ ಮಾನದಂಡ ಅನುಸರಿಸುತ್ತಿದೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದರು.

ಮಾಧ್ಯಮ ವರದಿಗಳು ನನ್ನ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳನ್ನು ಹರಿಯಬಿಡುತ್ತಿವೆ. ಆದರೆ ಹಿರಿಯ ನಾಯಕರ ನಡುವಿನ ಯಾವುದೇ ಆಂತರಿಕ ಚರ್ಚೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಆಹ್ವಾನಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಕಮ್ಯುನಿಕೇಷನ್ ಗ್ಯಾಪ್ ಆಗಿರಬಹುದು, ಅದು ಪ್ರಮುಖ ಸಮಸ್ಯೆಯಲ್ಲ, ಈ ಬಗ್ಗೆ ಪರಮೇಶ್ವರ ಅವರೊಂದಿಗೆ ಮಾತನಾಡುವುದಾಗಿ ಹೇಳಿದರು.

ಬಿಜೆಪಿ ಸ್ವತಃ ಪೆಟ್ರೋಲ್, ಡೀಸೆಲ್ ಮತ್ತು ಟೋಲ್‌ಗಳ ಬೆಲೆಗಳನ್ನು ಹೆಚ್ಚಿಸಿದೆ. "ಕಳೆದ ದಶಕದಲ್ಲಿ ಇಂಧನ ಬೆಲೆಗಳನ್ನು ಎಷ್ಟು ಬಾರಿ ಹೆಚ್ಚಿಸಲಾಗಿದೆ? ಆ ಸಮಯದಲ್ಲಿ ಬೆಲೆಗಳ ಏರಿಕೆ ವಿರೋಧಿಸಿ ಬಿಜೆಪಿ ಏಕೆ ಪ್ರತಿಭಟಿಸಲಿಲ್ಲ?" ಎಂದು ಪ್ರಶ್ನಿಸಿದರು.

ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಒದಗಿಸುವ ಅಗತ್ಯವು ಬೆಲೆ ಏರಿಕೆಯನ್ನು ಅನಿವಾರ್ಯವಾಗಿಸಿದೆ ಎಂದು ಅವರು ವಿವರಿಸಿದರು. ನವದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಕರ್ನಾಟಕ ಭವನವು ಈಗ 70 ಹೆಚ್ಚುವರಿ ಕೊಠಡಿಗಳನ್ನು ಹೊಂದಿದ್ದು, ಇದು ಸಂದರ್ಶಕರಿಗೆ ವಸತಿ ಸಮಸ್ಯೆ ನಿವಾರಿಸಲು ಸಹಾಯ ಮಾಡುತ್ತದೆ ಎಂದರು.

ಹೆದ್ದಾರಿ ಟೋಲ್ ಹೆಚ್ಚಳದಿಂದ ಕರ್ನಾಟಕಕ್ಕೆ ಯಾವುದೇ ಆದಾಯ ಸಿಗುವುದಿಲ್ಲ ಎಂದು ಜಾರಕಿಹೊಳಿ ಹೇಳಿದರು. ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ವಿಧಾನ ಪರಿಷತ್ತಿನ ನಾಮನಿರ್ದೇಶನಗಳು ಮತ್ತು ಇತರ ನೇಮಕಾತಿಗಾಗಿ ಹೆಚ್ಚಿನ ಜನರು ದೆಹಲಿಗೆ ಆಗಮಿಸಿದ್ದರಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಮುಖ್ಯಮಂತ್ರಿಗಳು ಅವರನ್ನು ಭೇಟಿ ಮಾಡಿದರೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೂ ಅವಕಾಶ ಸಿಗಲಿಲ್ಲ ಎಂದರು.

ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಪೊಲೀಸ್ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು. ವರದಿಗಾಗಿ ಕಾಯೋಣ. ಹೇಳಿಕೆಗಳು ಆಧಾರರಹಿತವಾಗಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT