ಡಿಕೆ ಶಿವಕುಮಾರ್  online desk
ರಾಜಕೀಯ

ಕುಮಾರಸ್ವಾಮಿಗೆಲ್ಲಾ ಹೆದರುವ ಮಗ ನಾನಲ್ಲ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಡಿಕೆಶಿ ಕೌಂಟರ್‌

ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.

ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.

ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT