ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

ಅಹಮದಾಬಾದ್‌ ಎಐಸಿಸಿ ಸಭೆಗೆ ರಾಜ್ಯದ 'ಕೈ' ನಾಯಕರು ದೌಡು: ಪಕ್ಷದ ಪುನಾರಚನೆಗೆ ಒತ್ತು

ಬುಧವಾರ ಮತ್ತು ಗುರುವಾರ ನಡೆಯಲಿರುವ ನಿರ್ಣಾಯಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಭೆ ಕಾಂಗ್ರೆಸ್‌ ರಾಜಕೀಯ ದಿಕ್ಸೂಚಿ ಬದಲಾಯಿಸುವ ಕ್ಷಣವಾಗಿದೆ, ಈ ಸಭೆಗೆ ಕರ್ನಾಟಕ ಹಲವು ಪ್ರಮುಖ ನಾಯಕರು ಹಾಜರಾಗಲಿದ್ದಾರೆ.

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ) ರಾಷ್ಟ್ರೀಯ ಸಮ್ಮೇಳನ ಇದೇ ಏಪ್ರಿಲ್​ 8- 9ರಂದು ಅಹಮದಾಬಾದ್​ನಲ್ಲಿ ಆಯೋಜನೆಗೊಂಡಿದ್ದು, 64 ವರ್ಷಗಳ ಬಳಿಕ ಗುಜರಾತ್​ನಲ್ಲಿ ಈ ಸಮ್ಮೇಳನ ನಡೆಯುತ್ತಿರುವುದು ವಿಶೇಷವಾಗಿದೆ.

ಬುಧವಾರ ಮತ್ತು ಗುರುವಾರ ನಡೆಯಲಿರುವ ನಿರ್ಣಾಯಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಭೆ ಕಾಂಗ್ರೆಸ್‌ ರಾಜಕೀಯ ದಿಕ್ಸೂಚಿ ಬದಲಾಯಿಸುವ ಕ್ಷಣವಾಗಿದೆ, ಈ ಸಭೆಗೆ ಕರ್ನಾಟಕ ಹಲವು ಪ್ರಮುಖ ನಾಯಕರು ಹಾಜರಾಗಲಿದ್ದಾರೆ.

ಇದು ಕೇವಲ ಮತ್ತೊಂದು ಕಾರ್ಯತಂತ್ರದ ಸಭೆ ಎಂದು ನಿರೀಕ್ಷಿಸಲಾಗುವುದಿಲ್ಲ ಎಂದು ಪಕ್ಷದ ಒಳಗಿನವರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ರಚಿಸುವತ್ತ ಪ್ರಮುಖ ಹೆಜ್ಜೆಯಾಗಲಿದೆ. ಸಂಘಟನೆಯನ್ನು ವಿಕೇಂದ್ರೀಕರಿಸಲು ಗಂಭೀರ ಪ್ರಯತ್ನ ನಡೆಯುತ್ತಿದೆ ಎಂದು ಎಐಸಿಸಿಯ ಹಿರಿಯ ಪದಾಧಿಕಾರಿಯೊಬ್ಬರು ಹೇಳಿದರು. ಜಿಲ್ಲಾಧ್ಯಕ್ಷರ ಜೊತೆ ಮಾಲೋಚಿಸಲು ಸಹ ಎಐಸಿಸಿ ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ನಾಯಕತ್ವವನ್ನು ಸಬಲೀಕರಣಗೊಳಿಸುವುದು ಹಾಗೂ ವಿಧಾನಸಭೆ ಮತ್ತು ಲೋಕಸಭೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚು ಪಾಲ್ಗೋಳ್ಳುವಂತೆಮಾಡುವುದಾಗಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವರು ಸೇರಿದಂತೆ ಕರ್ನಾಟಕದಿಂದ ಸುಮಾರು 140-150 ನಾಯಕರು ಎಐಸಿಸಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದು ಹೊಸ ಕಾಂಗ್ರೆಸ್‌ನ ಆರಂಭ ಎಂದು ಹಿರಿಯ ನಾಯಕರೊಬ್ಬರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಅಂಗೀಕರಿಸಲಾದ ಐತಿಹಾಸಿಕ ನಿರ್ಣಯವನ್ನು ಉಲ್ಲೇಖಿಸಿ ಹೇಳಿದರು, ಅಲ್ಲಿ ಪಕ್ಷವು ತನ್ನನ್ನು ತಾನು ಸುಧಾರಿಸಿಕೊಳ್ಳುವುದಾಗಿ ಮತ್ತು ಪುನರ್ರಚಿಸುವುದಾಗಿ ಭರವಸೆ ನೀಡಿತು.

ಮುಂದಿನ ವರ್ಷ ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಈಗಾಗಲೇ ಐದು ಬಿಜೆಪಿ ಆಡಳಿತಗಳನ್ನು ಕಂಡ ಗುಜರಾತಿನಲ್ಲಿ ಸರ್ಕಾರ ರಚಿಸುವುದಾಗಿ ಹೇಳಿಕೊಳ್ಳುತ್ತಿದೆ. "ಗುಜರಾತ್‌ನಲ್ಲಿ ಕಾಂಗ್ರೆಸ್ ಪುನರಾಗಮನಕ್ಕೆ ನಾವು ತಯಾರಿ ನಡೆಸುತ್ತಿದ್ದೇವೆ" ಎಂದು ಹಿರಿಯ ರಾಷ್ಟ್ರೀಯ ನಾಯಕರೊಬ್ಬರು ಘೋಷಿಸಿದರು.

ಕೆಲವು ಕೆಪಿಸಿಸಿ ಸಂಘಟಕರು ಈಗಾಗಲೇ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಅಹಮದಾಬಾದ್‌ಗೆ ತೆರಳುತ್ತಿದ್ದರೆ, ಹಲವಾರು ಉನ್ನತ ಸಚಿವರು ಮಂಗಳವಾರ ಸಂಜೆ ಹೊರಡಲಿದ್ದಾರೆ, ಉಳಿದ ಹಿರಿಯ ನಾಯಕರು ಬುಧವಾರ ಹೊರಡಲಿದ್ದಾರೆ.

ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸಲೀಮ್ ಅಹ್ಮದ್ ಮಾತನಾಡಿ, ಕಾಂಗ್ರೆಸ್ ಪುನರ್ರಚನೆ, ಸುಧಾರಣೆ ಮತ್ತು ಬಲಪಡಿಸುವ ಬಗ್ಗೆ ಗಂಭೀರ ಒತ್ತಡವಿದೆ ಎಂದು ಹೇಳಿದರು. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸೇರಿದಂತೆ ಪ್ರಮುಖ ತಂಡವು ಬುಧವಾರ ಬೆಳಿಗ್ಗೆ ಕರ್ನಾಟಕ ನಿಯೋಗವನ್ನು ಮುನ್ನಡೆಸಲಿದೆ ಎಂದು ಅವರು ಹೇಳಿದರು.

ಬಹುತೇಕ ಎಲ್ಲಾ ಉನ್ನತ ಕಾರ್ಯಕರ್ತರು ಅಹಮದಾಬಾದ್‌ಗೆ ಆಗಮಿಸಲಿದ್ದಾರೆ, ಕಾಂಗ್ರೆಸ್ ಪುನರುಜ್ಜೀವನದ ಕಥೆಯಲ್ಲಿ ಯಾವ ಅಧ್ಯಾಯವು ನಿರ್ಣಾಯಕವಾಗಲಿದೆ ಎಂಬುದರ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT