ಸಿಎಂ ಸಿದ್ದರಾಮಯ್ಯ 
ರಾಜಕೀಯ

ದೆಹಲಿಯಲ್ಲಿ ಹೈಕಮಾಂಡ್ ಭೇಟಿ: ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಂತೆ ಸಿಎಂ ಬಳಿಗೆ ಆಪ್ತ ಸಚಿವರ ದೌಡು, ಕುತೂಹಲ ಕೆರಳಿಸಿದ ಮಾತುಕತೆ

ರಾಹುಲ್ ಹಾಗೂ ಇತರ ಹೈಕಮಾಂಡ್ ನಾಯಕರ ಜತೆ ಸಿದ್ದರಾಮಯ್ಯ ನಡೆಸಿದ ಮಾತುಕತೆಯ ಬಗ್ಗೆ ತಿಳಿದುಕೊಳ್ಳಲು ಕೈಪಡೆಯ ನಾಯಕರು ಉತ್ಸುಕರಾಗಿದ್ದಾರೆ.

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಈ ಮಾತುಕೆತ ಕುರಿತು ರಾಜ್ಯ ನಾಯಕರಲ್ಲಿ ಕುತೂಹಲ ಹೆಚ್ಚಾಗಿದೆ.

ರಾಹುಲ್ ಹಾಗೂ ಇತರ ಹೈಕಮಾಂಡ್ ನಾಯಕರ ಜತೆ ಸಿದ್ದರಾಮಯ್ಯ ನಡೆಸಿದ ಮಾತುಕತೆಯ ಬಗ್ಗೆ ತಿಳಿದುಕೊಳ್ಳಲು ಕೈಪಡೆಯ ನಾಯಕರು ಉತ್ಸುಕರಾಗಿದ್ದಾರೆ.

ಇದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಪ್ತ ಸಚಿವರು ಒಬ್ಬೊಬ್ಬರಾಗಿಯೇ ಭೇಟಿ ನೀಡಿ ಕುತೂಹಲ ತಣಿಸಿಕೊಳ್ಳುತ್ತಿದ್ದರೆ, ಮುಖ್ಯಮಂತ್ರಿಗಳು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಸಿಎಂ ಅಧಿಕೃತ ನಿವಾಸ ‘ಕಾವೇರಿ’ಗೆ ಶುಕ್ರವಾರ ರಾತ್ರಿಯೇ ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಸಚಿವ ರಾಜಣ್ಣ ಧಾವಿಸಿ, ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದುಕೊಂಡಿದ್ದರೆ, ಶನಿವಾರ ಪರಮೇಶ್ವರ್ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

ಇದಲ್ಲದೆ, ಭಾನುವಾರ ಬೆಂಗಳೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನೂ ಕೆಲ ನಾಯಕರು ಸೌಜನ್ಯದ ನೆಪದಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸಿದ್ದಾರೆ,

ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಹನಿಟ್ರ್ಯಾಪ್ ಯತ್ನದ ಬಗ್ಗೆ ರಾಹುಲ್ ಅವರ ಪ್ರತಿಕ್ರಿಯೆ ಕುರಿತು ನಾಯಕರು ಕುತೂಹಲದಲ್ಲಿದ್ದಾರೆಂದು ಮೂಲಗಳು ತಿಳಿಸಿವೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT