ಮಲ್ಲಿಕಾರ್ಜುನ ಖರ್ಗೆ PTI
ರಾಜಕೀಯ

ಮೋದಿ ತವರು ರಾಜ್ಯದಿಂದಲೇ ದೇಶಕ್ಕೆ ಬಲವಾದ ಸಂದೇಶ ರವಾನಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಅಹಮದಾಬಾದ್ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಸೋಮವಾರ ನಡೆಯಲಿದ್ದು, ಸಭೆಯಲ್ಲಿ ದೇಶದ ಬಗ್ಗೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುವುದು. ಯಾವ ವಿಷಯಗಳ ಮೇಲೆ ಚರ್ಚೆ ಎಂದು ಈಗಲೇ ಹೇಳಲಾಗಲ್ಲ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯ (ಅಹಮದಾಬಾದ್) ದಿಂದಲೇ ದೇಶಕ್ಕೆ ಬಲವಾದ ಸಂದೇಶ ರವಾನಿಸುತ್ತೇವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಸೋಮವಾರ ನಡೆಯಲಿದ್ದು, ಸಭೆಯಲ್ಲಿ ದೇಶದ ಬಗ್ಗೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುವುದು. ಯಾವ ವಿಷಯಗಳ ಮೇಲೆ ಚರ್ಚೆ ಎಂದು ಈಗಲೇ ಹೇಳಲಾಗಲ್ಲ, ಹಿಂದೆ ನಡೆದ ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆಯೂ ಚರ್ಚಿಸಲಾಗುವುದು. ಸಭೆಯ ನಂತರ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದರು.

ಬಳಿಕ ದೇಶಕ್ಕೆ ಅಧಿಕೃತ ಸಂದೇಶ ಕೊಡುತ್ತೇವೆ. ಏನು ಸಂದೇಶ ಕೊಡ್ತೇವೆ ಅದನ್ನು ಇಲ್ಲಿ ಹೇಳುವುದು ಸರಿಯಲ್ಲ ಎಂದು ತಿಳಿಸಿದರು.

202ನೇ ಸಾಲಿನಲ್ಲಿ ಪಕ್ಷ ಸಂಘಟನೆ ವರ್ಷದ ಹಿನ್ನಲೆಯಲ್ಲಿ ನೇಮಕಾತಿಗಳು ಬಾಕಿ ಉಳಿದಿರುವ ವಿಚಾರವಾಗಿ ಇದೇ ವೇಳೆ ಮಾತನಾಡಿದ ಅವರು, ಎಲ್ಲಾ ಹುದ್ದೆಗಳ ನೇಮಕಾತಿ ಮಾಡುತ್ತಿದ್ದೇವಲ್ಲಾ. ಬಿಹಾರ ಮಾಡಿದ್ದೇವೆ, ಉತ್ತರಪ್ರದೇಶದಲ್ಲಿ ಮಾಡಿದ್ದೇವೆ. ಮೊನ್ನೆ ಅಸ್ಸಾಂ ನಲ್ಲೂ ಮಾಡಿದ್ದೇವೆ. ಒಂದೊಂದೇ ಮಾಡುತ್ತೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹೀಗಾಗಿ ಈ ಬಗ್ಗೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಎಐಸಿಸಿ ಅಧಿವೇಶನ ಗುಜರಾತ್‌ ನ ಅಹಮದಾಬಾದ್‌ನಲ್ಲಿ 64 ವರ್ಷಗಳ ಬಳಿಕ ನಡೆಯುತ್ತಿದೆ. ಈ ಹಿಂದೆ ಅಹಮದಾಬಾದ್ ನಲ್ಲಿ 1902 ಹಾಗೂ 1921 ರಲ್ಲಿ ಎಐಸಿಸಿ ಅಧಿವೇಶನ ನಡೆದಿತ್ತು. ಇದೀಗ 64 ವರ್ಷಗಳ ಬಳಿಕ ಮತ್ತೆ ಗುಜರಾತ್ ನಲ್ಲಿ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಐಸಿಸಿ ಪ್ರಮುಖರು ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT