ಸತೀಶ್ ಜಾರಕಿಹೊಳಿ  
ರಾಜಕೀಯ

ಪಕ್ಷದ ಹಲವಾರು ನಾಯಕರು KPCC ಹುದ್ದೆ ರೇಸ್ ನಲ್ಲಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ.

ಬೆಳಗಾವಿ: ಕೆಪಿಸಿಸಿ ಉನ್ನತ ಹುದ್ದೆಗೆ ನಾನೂ ಸೇರಿದಂತೆ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಬೆಲೆ ಏರಿಕೆ ಕುರಿತು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗಲೂ ವಿವಿಧ ವಸ್ತುಗಳ ಬೆಲೆಗಳು ಏರಿದ್ದವು. ಆದರೆ, ಇದೀಗ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

ಇದೇ ವೇಳೆ ಹಾಲಿನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಅವರು, ರೈತರಿಗೆ ಲಾಭ ಮಾಡುವ ಸಲುವಾಗಿ ಸರ್ಕಾರ ದರ ಏರಿಕೆ ಮಾಡಿದೆ. ವಿದ್ಯುತ್ ದರ ಏರಿಕೆಯ ಬಗ್ಗೆ ವಿದ್ಯುತ್ ನಿಯಂತ್ರಣ ಪ್ರಾಧಿಕಾರವು ನಿರ್ಧಾರ ತೆಗೆದುಕೊಳ್ಳಲಿದ್ದು, ಪ್ರತಿ ಎರಡು ಮೂರು ವರ್ಷಗಳಿಗೊಮ್ಮೆ ದರ ಏರಿಕೆ ಮಾಡುತ್ತದೆ ಎಂದು ಹೇಳಿದರು.

ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವಿದ್ಯುತ್ ದರಗಳ ಹೆಚ್ಚಳವು ನಿಯಂತ್ರಣ ಪ್ರಾಧಿಕಾರದ ಶಿಫಾರಸುಗಳ ಆಧಾರದ ಮೇಲೆ ಯಾವಾಗಲೂ ಸಂಭವಿಸಿದೆ. ಇತ್ತೀಚೆಗೆ, ಮೆಟ್ರೋ ಟಿಕೆಟ್ ಬೆಲೆಗಳನ್ನು ಸಹ ಹೆಚ್ಚಿಸಲಾಗಿದೆ. ಬಿಜೆಪಿ ಈ ವಿಷಯಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT