ಬಸವರಾಜ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್ ಸರ್ಕಾರದ ಶೇ.60ರಷ್ಟು ಕಮಿಷನ್ ಆರೋಪವನ್ನೂ ಸೇರಿಸಿ SIT ತನಿಖೆ ನಡೆಸಲಿ: ಬೊಮ್ಮಾಯಿ

ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್‌ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಶೇ.60ರಷ್ಟು ಕಮಿಷನ್ ಆರೋಪ ಕೇಳಿ ಬಂದಿದ್ದು, ಈ ಆರೋಪವನ್ನೂ ಸೇರಿಸಿ ಎಸ್ಐಟಿ ತನಿಖೆ ನಡೆಸಬೇಕೆಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೇ 40 ಕಮಿಷನ್‌ ಆರೋಪದ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿದೆ. ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್‌ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು. ಹಾಗೆಯೇ, ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ ಲೋಕೋಪಯೋಗಿ, ಅಬಕಾರಿ, ವಿದ್ಯುತ್‌ ಗುತ್ತಿಗೆದಾರರ ಸಂಘ ಮಾಡಿರುವ ಶೇ 60 ಕಮಿಷನ್‌ ಆರೋಪದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

‘ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಮಿಷನ್‌ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಿದಾಗ ಮುಖ್ಯಮಂತ್ರಿಯಾಗಿದ್ದ ನಾನು ಇದೇ ಮಾತು ಹೇಳಿದ್ದೆ. ಯಾರೂ ದೂರು ಕೊಡಲಿಲ್ಲ. ಅವರ ಬಳಿ ದಾಖಲೆ ಇರಲಿಲ್ಲ ಎಂದು ಹೇಳಿದರು.

ಸರ್ಕಾರದ ಆರ್ಥಿಕ ಸ್ಥಿತಿ ಕುರಿತು ಮಾತನಾಡಿ, ಈ ಸರ್ಕಾರದ ಬಳಿಕ ಪೂರ್ಣಗೊಂಡ ಕಾಮಗಾರಿಗಳಿಗೆ ಪಾವತಿಸಲು ಹಣವಿಲ್ಲ. ಹೀಗಾಗಿ ಟೆಂಡರ್ ನೀಡಿದ್ದರುೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಹಿಂಜರಿಯುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT