ಪ್ರತಾಪ್ ಸಿಂಹ 
ರಾಜಕೀಯ

ಜಾತಿ-ಜಾತಿ ಅಂತ ಮಂಗ್ಯಾಗಳ ರೀತಿ ಕಿತ್ತಾಡಬೇಡಿ; ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ: ಪ್ರತಾಪ್​ ಸಿಂಹ

ಜಾತಿಗಣತಿ ಸಂಖ್ಯೆ ಹೊರ ಹಾಕಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಇಬ್ಬರನ್ನು ಕುರಿ ಮಾಡಿದ್ದಾರೆ. ವಾಸ್ತವ ವಿಚಾರಗಳನ್ನು ಮರೆ ಮಾಚಲು ಸಿದ್ದರಾಮಯ್ಯ ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆ.

ಮೈಸೂರು: ಜಾತಿ ಸಂಖ್ಯೆ ಕಡಿಮೆಯಾಯಿತು ಎಂದು ಮಂಗ್ಯಾಗಳ ತರ ಕಿತ್ತಾಡಬೇಡಿ, ಹಿಂದೂಗಳಾಗಿ ಈ ಜಾತಿಗಣತಿ ನೋಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿವಿಮಾತು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಸಂಖ್ಯೆ ಹೊರ ಹಾಕಿ ಸಿಎಂ ಸಿದ್ದರಾಮಯ್ಯ ತನ್ನ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನು ಕುರಿ ಮಾಡಿದ್ದಾರೆ. ವಾಸ್ತವ ವಿಚಾರಗಳನ್ನು ಮರೆ ಮಾಚಲು ಸಿದ್ದರಾಮಯ್ಯ ಜಾತಿ ಜನಗಣತಿಯನ್ನು ಮುನ್ನೆಲೆಗೆ ಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಜಾತಿಗಳನ್ನು ಒಡೆಯುತ್ತಿಲ್ಲ. ಒಟ್ಟಾರೆಯಾಗಿ ಅವರು ಹಿಂದೂ ಧರ್ಮವನ್ನು ಒಡೆಯುತ್ತಿದ್ದಾರೆ ಎಂದು ಹೇಳಿದರು.

ಲಿಂಗಾಯತರು, ಒಕ್ಕಲಿಗರು, ಒಬಿಸಿ ಜನಸಂಖ್ಯೆ ಕಡಿಮೆ ಆಯ್ತು ಅನ್ನೋದಷ್ಟೆ ನೋಡಬೇಡಿ. ಒಟ್ಟಾರೆ ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ. ನಮ್ಮ‌ ಜಾತಿ‌ ಸಂಖ್ಯೆ ಕಡಿಮೆ ಆಯ್ತು ಅಂತಾ ಪರಸ್ಪರ ಮಂಗ್ಯಾಗಳ ರೀತಿ ಕಿತ್ತಾಡಬೇಡಿ. ಹಿಂದೂಗಳಾಗಿ ಈ ಜಾತಿ ಗಣತಿ ನೋಡಿ. ಯಾರ ಮನೆಗೆ ಬಂದು ಜಾತಿ ಗಣತಿ ಮಾಡಿದ್ದಾರೆ? ಸಿಎಂ ಎಲ್ಲರನ್ನು ಕುರಿ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಆಗ ಅಹಿಂದ ಅಂತಾ ಆಗ ಒಂದು ವರ್ಗ ಒಡೆದರು. ಈಗ ಜಾತಿಗಣತಿ ಹೆಸರಲ್ಲಿ ಇಡೀ ಹಿಂದೂ ಧರ್ಮ ಒಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ. ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ. ಬೆಲೆ ಏರಿಕೆಯಾಗಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ ನಡೆದಿದೆ.

ಇವೆಲ್ಲವನ್ನು ಮರೆ ಮಾಚಲು ಜಾತಿಗಣತಿ ಬಿಚ್ಚಿಟ್ಟಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ನಾಟಕ ಇದು. ಲಿಂಗಾಯತರಿಗೆ, ಒಕ್ಕಲಿಗರು, ಒಬಿಸಿ ಎಲ್ಲದರಲ್ಲೂ ಉಪಜಾತಿ ಲೆಕ್ಕ ಹಾಕಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್‌ರಲ್ಲಿ ಉಪಜಾತಿ ಯಾಕೆ ಲೆಕ್ಕ ಹಾಕಿಲ್ಲ ಎಂದು ಪ್ರಶ್ನಿಸಿದರು.

ನಿಮ್ಮ ಪಕ್ಷದಲ್ಲೇ ಜಾತಿಗಣತಿ ಗೊಂದಲ ಇದೆ. ಒಂದು ಕಡೆ ಡಿಕೆ ಶಿವಕುಮಾರ್ ಒಕ್ಕಲಿಗ ಶಾಸಕರ ಸಭೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯತರ ಸಭೆ ಕರೆದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT