ಶಾಸಕ ಅರವಿಂದ ಬೆಲ್ಲದ್ 
ರಾಜಕೀಯ

ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಪರಿಗಣಿಸಿರುವ ಜಾತಿ ಜನಗಣತಿ ವರದಿಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು, ಇದು ಸಮಾಜವನ್ನು ವಿಭಜಿಸುವ ಪಿತೂರಿಯಲ್ಲದೆ ಬೇರೇನೂ ಅಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದು ಎಲ್ಲಾ ಸಮುದಾಯಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದು ಜನಗಣತಿಯಲ್ಲ, ಆದರೆ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯದ ಒಂದು ಸಾಧನ ಎಂದು ಆರೋಪಿಸಿದರು.

ಸರ್ಕಾರದ ನಡೆ 66.35 ಲಕ್ಷ ಲಿಂಗಾಯತರು ಮತ್ತು 10.49 ಲಕ್ಷ ವೀರಶೈವ ಲಿಂಗಾಯತರನ್ನು ಬೇರ್ಪಡಿಸುವ ಮತ್ತು ಬಣಜಿಗ, ಗಾಣಿಗ, ಸಾದರ, ಉಪ್ಪಾರ, ಒಕ್ಕಲಿಗ, ಜಂಗಮ ಮುಂತಾದ ಉಪಪಂಗಡಗಳಾಗಿ ವಿಭಜಿಸುವ ಮೂಲಕ ಲಿಂಗಾಯತ ಸಮುದಾಯದ ಅಸ್ತಿತ್ವವನ್ನೇ ದುರ್ಬಲಗೊಳಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT