ಡಿ.ಕೆ.ಶಿವಕುಮಾರ್ 
ರಾಜಕೀಯ

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು: ಡಿ.ಕೆ.ಶಿವಕುಮಾರ್

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದರು.

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಆರ್.ಅಶೋಕ್ ಅವರು ಸುಳ್ಳು ಹೇಳಬಾರದು. ಜಾತಿಗಣತಿ ವರದಿ ನಿಜವೇ ಸುಳ್ಳೇ, ನಕಲಿಯೇ ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಕೇಳಲಿ ಅಥವಾ ಅಧಿಕಾರಿಯಾದ ದಯಾನಂದ್ ಅವರ ಬಳಿ ವಿಚಾರಿಸಿದರೆ ಉತ್ತರ ಸಿಗಬಹುದು ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜಾತಿಗಣತಿ ವರದಿಯನ್ನು ಸಿದ್ದರಾಮಯ್ಯ ಅವರು ಮನೆಯಲ್ಲಿ ಇಟ್ಟುಕೊಂಡಿದ್ದಾರೆ ಎನ್ನುವ ಆರ್.ಅಶೋಕ್ ಅವರ ಆರೋಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದರು. ಜಾತಿಗಣತಿ ಅನುಷ್ಠಾನಕ್ಕೆ ಇನ್ನೂ ಒಂದು ವರ್ಷವಾಗಲಿದೆ ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಇದು ಆಂತರಿಕವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ವಿಚಾರ. ಸಾರ್ವಜನಿಕವಾಗಿ ಚರ್ಚೆ ಮಾಡುವ ಸಂಗತಿ ಇದಲ್ಲ ಎಂದು ಹೇಳಿದರು.

ಜನಿವಾರ ತೆಗೆಸಿದ್ದು ತಪ್ಪು. ಒಂದಷ್ಟು ಮಂದಿ ಲಿಂಗ, ಉಡುದಾರ ಧರಿಸಿರುತ್ತಾರೆ. ತಾಳಿ, ಓಲೆ, ಜನಿವಾರ ಇವುಗಳನ್ನು ಮುಟ್ಟಬಾರದು. ಇದೆಲ್ಲ ಅವರವರ ಧರ್ಮದ ವಿಚಾರ. ಸರ್ಕಾರ ಇಂತಹ ವಿಚಾರಗಳಿಗೆ ಅವಕಾಶ ಕೊಡುವುದಿಲ್ಲ. ಪೊಲೀಸ್ ಕೆಲಸಕ್ಕೆ ಆಯ್ಕೆ ಮಾಡುವಾಗ ತೆಗೆಸುವ ಪದ್ಧತಿಯಿದೆ. ಆದರೆ ಶಾಲಾ ಕಾಲೇಜುಗಳಲ್ಲಿ ತೆಗೆಯಬಾರದು. ಈ ರೀತಿ ಮಾಡಿದ್ದು ತಪ್ಪು. ಕಣ್ಣಿಗೆ ಕಾಣದ ಬ್ಲೂಟೂತ್ ಸಾಧನಗಳು ಸೇರಿದಂತೆ ಒಂದಷ್ಟು ಸಾಧನಗಳನ್ನು ಬಳಸಿಕೊಂಡು ನಕಲು ಮಾಡಿದ್ದ ಘಟನೆಗಳು ಈ ಹಿಂದೆ ನಡೆದಿತ್ತು. ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT