ಡಿ.ಕೆ.ಶಿವಕುಮಾರ್ 
ರಾಜಕೀಯ

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು: ಡಿ.ಕೆ.ಶಿವಕುಮಾರ್

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದರು.

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಆರ್.ಅಶೋಕ್ ಅವರು ಸುಳ್ಳು ಹೇಳಬಾರದು. ಜಾತಿಗಣತಿ ವರದಿ ನಿಜವೇ ಸುಳ್ಳೇ, ನಕಲಿಯೇ ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಕೇಳಲಿ ಅಥವಾ ಅಧಿಕಾರಿಯಾದ ದಯಾನಂದ್ ಅವರ ಬಳಿ ವಿಚಾರಿಸಿದರೆ ಉತ್ತರ ಸಿಗಬಹುದು ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜಾತಿಗಣತಿ ವರದಿಯನ್ನು ಸಿದ್ದರಾಮಯ್ಯ ಅವರು ಮನೆಯಲ್ಲಿ ಇಟ್ಟುಕೊಂಡಿದ್ದಾರೆ ಎನ್ನುವ ಆರ್.ಅಶೋಕ್ ಅವರ ಆರೋಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದರು. ಜಾತಿಗಣತಿ ಅನುಷ್ಠಾನಕ್ಕೆ ಇನ್ನೂ ಒಂದು ವರ್ಷವಾಗಲಿದೆ ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಇದು ಆಂತರಿಕವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ವಿಚಾರ. ಸಾರ್ವಜನಿಕವಾಗಿ ಚರ್ಚೆ ಮಾಡುವ ಸಂಗತಿ ಇದಲ್ಲ ಎಂದು ಹೇಳಿದರು.

ಜನಿವಾರ ತೆಗೆಸಿದ್ದು ತಪ್ಪು. ಒಂದಷ್ಟು ಮಂದಿ ಲಿಂಗ, ಉಡುದಾರ ಧರಿಸಿರುತ್ತಾರೆ. ತಾಳಿ, ಓಲೆ, ಜನಿವಾರ ಇವುಗಳನ್ನು ಮುಟ್ಟಬಾರದು. ಇದೆಲ್ಲ ಅವರವರ ಧರ್ಮದ ವಿಚಾರ. ಸರ್ಕಾರ ಇಂತಹ ವಿಚಾರಗಳಿಗೆ ಅವಕಾಶ ಕೊಡುವುದಿಲ್ಲ. ಪೊಲೀಸ್ ಕೆಲಸಕ್ಕೆ ಆಯ್ಕೆ ಮಾಡುವಾಗ ತೆಗೆಸುವ ಪದ್ಧತಿಯಿದೆ. ಆದರೆ ಶಾಲಾ ಕಾಲೇಜುಗಳಲ್ಲಿ ತೆಗೆಯಬಾರದು. ಈ ರೀತಿ ಮಾಡಿದ್ದು ತಪ್ಪು. ಕಣ್ಣಿಗೆ ಕಾಣದ ಬ್ಲೂಟೂತ್ ಸಾಧನಗಳು ಸೇರಿದಂತೆ ಒಂದಷ್ಟು ಸಾಧನಗಳನ್ನು ಬಳಸಿಕೊಂಡು ನಕಲು ಮಾಡಿದ್ದ ಘಟನೆಗಳು ಈ ಹಿಂದೆ ನಡೆದಿತ್ತು. ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ” ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT