ಎಚ್‌ಡಿ ಕುಮಾರಸ್ವಾಮಿ  
ರಾಜಕೀಯ

ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್‌ 1: ಯೂಟರ್ನ್ ಹೊಡೆದ ಬಸವರಾಜ ರಾಯರೆಡ್ಡಿ ವಿರುದ್ಧ HDK ಕಿಡಿ

ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾಭಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ.

ಬೆಂಗಳೂರು: ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್‌ 1 ಎಂದು ಹೇಳಿ ಇದೀಗ ಯೂಟರ್ನ್ ಹೊಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ವಿರುದ್ಧ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ರಾಯರೆಡ್ಡಿಯವರು ತಮ್ಮ ಹೇಳಿಕೆಯಿಂದ ಹಿಂದೆ ಸರಿಯುವ ಅಗತ್ಯವಿಲ್ಲ. ಅವರು ಸತ್ಯವನ್ನೇ ಹೇಳಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾಭಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.

ಗುತ್ತಿಗೆಯಲ್ಲಿ ಪರ್ಸಂಟೇಜ್, ಕಮಿಷನ್ ದಂಧೆ ಆರಂಭಿಸಿದ್ದು ಅನ್ಯಪಕ್ಷಗಳ ಸರಕಾರಗಳೇ ಹೊರತು ಜೆಡಿಎಸ್ ಸರಕಾರವಲ್ಲ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಗುತ್ತಿಗೆದಾರರಿಗೆ ನಿಯಮಿತವಾಗಿ ಹಣ ಪಾವತಿ ಆಗುತ್ತಿತ್ತು, ವಿಳಂಬ ಎನ್ನುವ ಪ್ರಶ್ನೆಯೇ ಇರಲಿಲ್ಲ. ನನ್ನ ಆಡಳಿತದಲ್ಲಿ ಕಮಿಷನ್ ದಂಧೆ ವಿಧಾನಸೌಧದ ಮೆಟ್ಟಿಲು ಮುಟ್ಟಲು ಬಿಟ್ಟಿರಲಿಲ್ಲ. ಸೋ ಕಾಲ್ಡ್ ಸತ್ಯಸಂಧರಾದ ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು.

ಭ್ರಷ್ಟಾಚಾರದ ವಿರುದ್ಧ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಯರೆಡ್ಡಿ ಹೇಳಿದ್ದಾರೆ! ಪಾಪ.. ಅವರು ಏಕಿಷ್ಟು ಹೆದರಿದರು ಎನ್ನುವುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಅಧಿಕಾರ ಮತ್ತು ಆಸರೆ ನಾಲಿಗೆಯ ಶಕ್ತಿಯನ್ನು ಕುಂದಿಸುತ್ತವೆ. ಸನ್ಮಾನ್ಯ ಸಿಎಂ ಸಾಹೇಬರ ಸರಣಿ ಹಗರಣಗಳ ಸಿದ್ವಿಲಾಸಿ ಬಗ್ಗೆ ಅರಿಯದಷ್ಟು ಮುಗ್ಧರೇ ರಾಯರೆಡ್ಡಿ. ಕರ್ನಾಟಕವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಈಸ್ಟ್ ಇಂಡಿಯಾ ಕಂಪನಿ ಸರಕಾರದ ಭಾಗವಾಗಿರುವ ಅವರಿಗೆ ಜೆಡಿಎಸ್ ಕುರಿತು ಟೀಕಿಸುವ ನೈತಿಕತೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

SCROLL FOR NEXT