ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನಿ ಮೋದಿ 
ರಾಜಕೀಯ

ಸಿಂಧೂ ನದಿ ನೀರು ತಡೆಹಿಡಿಯಲು ನಮ್ಮಲ್ಲಿ ಸಾಕಷ್ಟು ಅಣೆಕಟ್ಟುಗಳಿವೆಯೇ? ಮೋದಿಗೆ ಖರ್ಗೆ ಪ್ರಶ್ನೆ

ಪಹಲ್ಗಾಮ್ ದಾಳಿ ಭದ್ರತಾ ವೈಫಲ್ಯ ಎಂದು ಸ್ವತಃ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸಭೆ ಕರೆದಿದ್ದೇವೆ ಅಂತ ಅಮಿತ್ ಶಾ ಹೇಳಿದ್ದಾರೆ ಎಂದರು.

ಬೆಂಗಳೂರು: 1960ರ ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಅಪ್ರಾಯೋಗಿಕ ಎಂದು ಟೀಕಿಸಿದ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆಹಿಡಿಯಲು ನಮ್ಮ ದೇಶ ಸಾಕಷ್ಟು ಅಣೆಕಟ್ಟುಗಳನ್ನು ಹೊಂದಿದೆಯೇ? ಎಂದು ಶನಿವಾರ ಪ್ರಶ್ನಿಸಿದ್ದಾರೆ.

ಕೆಲವು ದಿನಗಳ ಹಿಂದೆ ಹೈದರಾಬಾದ್ ಸಂಸದ, ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ, ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದರೂ, ಸಿಂಧೂ ನದಿ ಒಪ್ಪಂದದ ವಿಷಯವನ್ನು ಪ್ರಶ್ನಿಸಿದ್ದರು.

"ಇದು ತಪ್ಪು ಹುಡುಕುವ ಸಮಯವಲ್ಲ. ಸಂದರ್ಭ ಬಂದಾಗ ನಾವು ಅದನ್ನು ಹೇಳುತ್ತೇವೆ. ಕೆಲವು ನಿರ್ದಿಷ್ಟತೆಗಳಿರುತ್ತವೆ. ಆದರೆ ಎಲ್ಲವನ್ನೂ ಈಗಲೇ ಹೇಳುವುದು ಒಳ್ಳೆಯದಲ್ಲ. ತೆಗೆದುಕೊಂಡ ಕ್ರಮದ ಪರಿಣಾಮಗಳೇನು ಎಂಬುದು ಮುಂದೆ ಚರ್ಚೆಯಾಗುತ್ತದೆ. ನಮ್ಮಿಂದ ಹರಿಯುತ್ತಿರುವ ನೀರನ್ನು ನಾವು ಹೇಗೆ ತಡೆಹಿಡಿಯಬಹುದು? ಅದನ್ನು ಸಂಗ್ರಹಿಸಲು ನಮ್ಮಲ್ಲಿ ಸಾಕಷ್ಟು ಅಣೆಕಟ್ಟುಗಳಿವೆಯೇ?. ಸರ್ಕಾರ ಈಗ ತೆಗೆದುಕೊಂಡ ನಿರ್ಧಾರ ಮತ್ತು ನಿರ್ಣಯವು ದೇಶಕ್ಕೆ ಒಳ್ಳೆಯದು. ಆದರೆ ಫಲಿತಾಂಶ ನೋಡದೆ ನಾವು ಟೀಕಿಸುತ್ತಲೇ ಇದ್ದರೆ ಅದು ಒಳ್ಳೆಯದಲ್ಲ" ಎಂದು ಖರ್ಗೆ ವರದಿಗಾರರಿಗೆ ತಿಳಿಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿ ಭಾಗವಹಿಸಬೇಕಿತ್ತು. "ಸರ್ಕಾರದ ಪರವಾಗಿ ಮೋದಿ, ಭದ್ರತಾ ಲೋಪ ಸೇರಿದಂತೆ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಸಭೆಯಲ್ಲಿ ಇರಬೇಕಿತ್ತು. ಆದರೆ ಅವರು ಸಭೆಗೆ ಗೈರುಹಾಜರಾಗಿದ್ದರು, ಅದು ಸರಿಯಲ್ಲ. ಆದರೆ ಭಯೋತ್ಪಾದನೆಯನ್ನು ನಿಗ್ರಹಿಸುವುದನ್ನು ಸವಾಲಾಗಿ ತೆಗೆದುಕೊಳ್ಳುವಂತೆ ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿದ್ದೇವೆ. ಪಹಲ್ಗಾಮ್‌ನಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಅವರು ಭರವಸೆ ನೀಡಿದರು. ದೇಶದ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಂಡ ಯಾವುದೇ ನಿರ್ಧಾರವನ್ನು ಎಲ್ಲರೂ ಒಗ್ಗಟ್ಟಿನಿಂದ ಬೆಂಬಲಿಸುವಂತೆ ನಾವು ಹೇಳಿದ್ದೇವೆ" ಎಂದರು.

ಪಹಲ್ಗಾಮ್ ದಾಳಿ ಭದ್ರತಾ ವೈಫಲ್ಯ ಎಂದು ಸ್ವತಃ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸಭೆ ಕರೆದಿದ್ದೇವೆ ಅಂತ ಅಮಿತ್ ಶಾ ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT