ಬಿಜೆಪಿ ನಾಯಕರು. 
ರಾಜಕೀಯ

ಚುನಾವಣಾ ಅಕ್ರಮ ಆರೋಪ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ; ಸೋಲು ಮರೆಮಾಚಲು ನಡೆಸುತ್ತಿರುವ ಹತಾಶ ಯತ್ನ- BJP ಟೀಕೆ

ಜನರ ನಂಬಿಕೆಯನ್ನು ಕಳೆದುಕೊಂಡ ನಂತರ ಸುಳ್ಳುಗಳನ್ನು ಹರಡುವುದು ಪ್ರಜಾಪ್ರಭುತ್ವವಲ್ಲ. ಈ ಪ್ರತಿಭಟನೆ ಹತಾಶ ಪ್ರಯತ್ನವಾಗಿದೆ. ಮಹಾದೇವಪುರ ಮತ್ತು ರಾಜಾಜಿನಗರದ ಜನಾದೇಶವನ್ನು ಯಾವುದೇ ನಕಲಿ ನಿರೂಪಣೆಯು ದುರ್ಬಲಗೊಳಿಸಲು ಸಾಧ್ಯವಿಲ್ಲ.

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಪಕ್ಷದ ಈ ನಡೆಯನ್ನು ಬಿಜೆಪಿ ಟೀಕಿಸಿದೆ.

ಬಿಜೆಪಿ ಸಂಸದ ಪಿಸಿ.ಮೋಹನ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿನ ಹೀನಾಯ ಸೋಲನ್ನು ಮರೆಮಾಚಲು ಹತಾಶ ಯತ್ನ ನಡೆಸತ್ತಿದ್ದಾರೆಂದು ಟೀಕಿಸಿದ್ದಾರೆ.

ವಂಶಪಾರಂಪರ್ಯದ ಪರವಲ್ಲದೆ, ಮಹದೇವಪುರ ಮತ್ತು ರಾಜಾಜಿನಗರದ ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ. ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರ ಬಳಿ ಶೇ.100ರಷ್ಟು ಪುರಾವೆ ಇರುವುದೇ ಆದರೆ, ಬೆಂಗಳೂರಿನಲ್ಲಿ ಬೀದಿ ನಾಟಕ ಮಾಡುವ ಬದಲು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ.

ಜನರ ನಂಬಿಕೆಯನ್ನು ಕಳೆದುಕೊಂಡ ನಂತರ ಸುಳ್ಳುಗಳನ್ನು ಹರಡುವುದು ಪ್ರಜಾಪ್ರಭುತ್ವವಲ್ಲ. ಈ ಪ್ರತಿಭಟನೆ ಹತಾಶ ಪ್ರಯತ್ನವಾಗಿದೆ. ಮಹಾದೇವಪುರ ಮತ್ತು ರಾಜಾಜಿನಗರದ ಜನಾದೇಶವನ್ನು ಯಾವುದೇ ನಕಲಿ ನಿರೂಪಣೆಯು ದುರ್ಬಲಗೊಳಿಸಲು ಸಾಧ್ಯವಿಲ್ಲ. ಯಾವುದೇ ಅಪಪ್ರಚಾರವು ಮತಪತ್ರದ ತೀರ್ಪನ್ನು ಪುನಃ ಬರೆಯಲು ಸಾಧ್ಯವಿಲ್ಲ. ಬೀದಿ ಪ್ರದರ್ಶನಗಳನ್ನು ನಡೆಸುವ ಬದಲು ಕಾಂಗ್ರೆಸ್ ಜನಾದೇಶವನ್ನು ಗೌರವಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

SCROLL FOR NEXT