ಸಹಕಾರ ಸಚಿವ ಕೆ.ಎನ್. ರಾಜಣ್ಣ 
ರಾಜಕೀಯ

ಅಧಿಕಾರದಲ್ಲಿದ್ದರೂ ಮತಗಳ್ಳತನ ತಡೆಯುವಲ್ಲಿ ಕಾಂಗ್ರೆಸ್ ವಿಫಲ: ಸಚಿವ ರಾಜಣ್ಣ

2024 ರ ಕರ್ನಾಟಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ "ಚುನಾವಣಾ ಅಕ್ರಮ"ಗಳನ್ನು ತಡೆಯಲು ಸಾಧ್ಯವಾಗಲಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ "ಮತ ಕಳ್ಳತನ"ವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಶುಕ್ರವಾರ ಹೇಳಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ರ್ಯಾಲಿಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾಡಿರುವ ಮತ ಕಳ್ಳತನ ಆರೋಪ ನಿಜವಾಗಿದೆ. ನಾವು ಎಂಟು ವಿಧಾನಸಭಾ ಸ್ಥಾನಗಳಲ್ಲಿ ಏಳರಲ್ಲಿ ಮುನ್ನಡೆ ಸಾಧಿಸಿದ್ದೇವೆ, ಆದರೆ ಮಹದೇವಪುರದಲ್ಲಿ ಹಿಂದುಳಿದಿದ್ದೇವೆ, ಇದು ಫಲಿತಾಂಶಗಳನ್ನು ನಮ್ಮ ವಿರುದ್ಧ ತಿರುಗಿಸಿತು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಇಂತಹ ಅಕ್ರಮಗಳಿಗೆ ಹೆಸರುವಾಸಿಯಾಗಿದೆ ಎಂದು ಟೀಕಿಸಿದರು.

2024 ರ ಕರ್ನಾಟಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ "ಚುನಾವಣಾ ಅಕ್ರಮ"ಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ಅಕ್ರಮಗಳನ್ನು ತಪ್ಪಿಸುವ ಬಗ್ಗೆ ನಾವು ಹೆಚ್ಚು ಜಾಗರೂಕರಾಗಿರಬೇಕಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್