ಸಿಎಂ ಇಬ್ರಾಹಿಂ 
ರಾಜಕೀಯ

ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲ್ತಿದ್ರು; ನಾನು ಚಿಮ್ಮನಕಟ್ಟಿ ಸೇರಿ 3000 ಮತ ಖರೀದಿಸಿದ್ದರಿಂದ ಗೆದ್ರು: ಇಬ್ರಾಹಿಂ

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ.

ಮೈಸೂರು: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.

ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ.

ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.

ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT