ಸತೀಶ್ ಜಾರಕಿಹೊಳಿ 
ರಾಜಕೀಯ

ಕಾಂಗ್ರೆಸ್‌ನಲ್ಲಿ 'ಪಿತೂರಿ' ನಡೆಯುತ್ತಿದೆ; ನಾವು ಹುಷಾರಾಗಿರಬೇಕು: ಸತೀಶ್ ಜಾರಕಿಹೊಳಿ

ರಾಜಣ್ಣ ಅವರು "ಪಿತೂರಿ"ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು. ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ.

ಬೆಂಗಳೂರು: ರಾಜಕೀಯದಲ್ಲಿ ಯಾವಾಗಲೂ ಹಗೆ ಇದ್ದೇ ಇರುತ್ತದೆ. ನಾವು ಹುಷಾರಾಗಿ ಮತ್ತು ಬಿಗಿಯಾಗಿ ಇರಬೇಕಾಗುತ್ತದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು. ರಾಜಕೀಯದಲ್ಲಿ ಯಾವಾಗಲೂ ಹೀಗೇ ಇರುವುದಿಲ್ಲ. ವಾಪಸ್‌ ಆಗಲೂಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ವಜಾಗೊಳಿಸಿರುವ ಸಂಬಂಧ ಸ್ವತಃ ಅವರೇ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಾರೆ. ರಾಜಣ್ಣ ಅವರು "ಪಿತೂರಿ"ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು.

ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ. ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ದೆಹಲಿಗೆ ರಾಜಣ್ಣ ಹೋಗ್ತೀನಿ ಎಂದು ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.

ಪಕ್ಷದ ನಾಯಕರಿಗೆ ಸ್ಪಷ್ಟನೆ ನೀಡುತ್ತಾರೆ. ಮುಂದೆ ಇದನ್ನು ತಿಳಿ ಮಾಡೋಣ. ಸಮುದಾಯವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲ. ನಾಗೇಂದ್ರ ಘಟನೆಯೇ ಬೇರೆ ಈ ಘಟನೆಯೇ ಬೇರೆ. ಮುಂದಿನ ದಿನಗಳಲ್ಲಿ ರಾಜಣ್ಣ ಅವರೇ ಇದರ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಬಿಹಾರ ರೀತಿ ಫಲಿತಾಂಶ ಮರುಕಳಿಸಲಿದೆ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'.. ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪುರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!

Bihar Elections 2025: NDA ಗೆಲುವಿನ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ Modi ಬಗ್ಗೆ Nitish ಅಚ್ಚರಿಯ ಹೇಳಿಕೆ!

SCROLL FOR NEXT