ಸಿಎಂ ಸಿದ್ದರಾಮಯ್ಯ 
ರಾಜಕೀಯ

'ರಾಜಣ್ಣ ವಜಾ' ಪಕ್ಷದ ಆಂತರಿಕ ವಿಚಾರ; ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ನೀವು ಉತ್ತರ ಕೊಟ್ಟಿದ್ದೀರಾ?

‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ?

ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದು ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಇಂದು ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ಸರಕಾರದಿಂದ ಸೂಕ್ತ ಉತ್ತರ ಬಂದಿಲ್ಲ.

ರಾಜಣ್ಣನ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನು ತುಳಿಯಲಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ? ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದಾಗ ನೀವು ಉತ್ತರ ಕೊಟ್ಟಿದ್ದೀರಾ? ಇದು ಪಕ್ಷದ ಆಂತರಿಕ ವಿಚಾರ’ ಎಂದು ತಿರುಗೇಟು ನೀಡಿದರು.

ಈ ವೇಳೆ ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಈ ವಿಷಯದ ಬಗ್ಗೆ ಸಭಾ ನಾಯಕರು ಉತ್ತರಿಸಿದ್ದಾರೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ’ ಎಂದು ರೂಲಿಂಗ್ ನೀಡಿ ಗದ್ದಲಕ್ಕೆ ಕೊನೆ ಹಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!