ಬಿ.ಎಲ್ ಸಂತೋಷ್ 
ರಾಜಕೀಯ

RSS ಬಿಜೆಪಿಯ ಸೈದ್ಧಾಂತಿಕ ಅಡಿಪಾಯ: ಸುದೀರ್ಘ ಆಡಳಿತಕ್ಕೆ ವಾಜಪೇಯಿ ಬುನಾದಿ; ಬಿ.ಎಲ್ ಸಂತೋಷ್‌

ನಿಮ್ಮ ಸಂಗಾತಿಗಳು (ಸ್ಟಾಲಿನ್ ಪಿಣರಾಯಿ ವಿಜಯನ್‌ ಮಮತಾ ಬ್ಯಾನರ್ಜಿ) ಮಾಡುವ ಟ್ವೀಟ್‌ಗಳು ದೇಶದ ಜನರ ಮನಸ್ಸುಗಳನ್ನು ವಿಚಲಿತಗೊಳಿಸಲು ಆಗುವುದಿಲ್ಲ.

ಬೆಂಗಳೂರು: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಬಗ್ಗೆ ಉಲ್ಲೇಖಿಸಿದ್ದನ್ನು ಟೀಕಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಶನಿವಾರ ಟೀಕಿಸಿದ್ದಾರೆ.

ನಾನು ಸಿದ್ದರಾಮಯ್ಯ ಅವರಿಗೆ ಹೇಳಲು ಬಯಸುತ್ತೇನೆ, ಆರ್‌ಎಸ್‌ಎಸ್ ಯಾವಾಗಲೂ ಬಿಜೆಪಿಗೆ ಸೈದ್ಧಾಂತಿಕ ಮತ್ತು ಬೌದ್ಧಿಕ ಅಡಿಪಾಯವಾಗಿರುತ್ತದೆ. ಅದು ರಾಷ್ಟ್ರೀಯ ಜೀವನದ ಮುಖ್ಯವಾಹಿನಿಗೆ ಪ್ರವೇಶಿಸಿದೆ. ಹೆಚ್ಚಿನ ಜನರು ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ, ನಿಮ್ಮ ಟ್ವೀಟ್ ಜನರ ಮನಸ್ಸನ್ನು ಕದಲಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ನಡೆದ ಕಾರ್ಯಕ್ರಮದಲ್ಲಿ ಸಂತೋಷ್ ಹೇಳಿದರು.

ವಾಜಪೇಯಿ ಅವರು ಒಂದು ಜೀವನ, ಒಂದು ಧ್ಯೇಯ, ಒಂದು ನಂಬಿಕೆ ಮತ್ತು ಒಂದು ಸಿದ್ಧಾಂತದಲ್ಲಿ ನಂಬಿಕೆ ಇಡುವ ಸಂಘಟನೆಯಲ್ಲಿ 67 ವರ್ಷಗಳ ಕಾಲ ಜೀವಿಸಿದ್ದಾರೆ. ಅದಕ್ಕಾಗಿಯೇ ಅಟಲ್ ಅಥವಾ ಮೋದಿ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿಲ್ಲ ಎಂದು ಸಂತೋಷ್ ತಿಳಿಸಿದ್ದಾರೆ.

ಗಾಂಧಿ ಹತ್ಯೆ ಆರ್‌ಎಸ್‌ಎಸ್‌ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ಬಿಜೆಪಿಗೆ ವೈಚಾರಿಕ ಸೈದ್ಧಾಂತಿಕ ಮತ್ತು ಕಾರ್ಯಬದ್ಧತೆಯ ಬುನಾದಿಯಾಗಿ ಇದ್ದೇ ಇರುತ್ತದೆ. ನಿಮ್ಮ ಸಂಗಾತಿಗಳು (ಸ್ಟಾಲಿನ್ ಪಿಣರಾಯಿ ವಿಜಯನ್‌ ಮಮತಾ ಬ್ಯಾನರ್ಜಿ) ಮಾಡುವ ಟ್ವೀಟ್‌ಗಳು ದೇಶದ ಜನರ ಮನಸ್ಸುಗಳನ್ನು ವಿಚಲಿತಗೊಳಿಸಲು ಆಗುವುದಿಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ’ ಎಂದು ಬಿ.ಎಲ್‌ ಸಂತೋಷ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

G20 Summit: ಭಯೋತ್ಪಾದನೆ- ಮಾದಕ ದ್ರವ್ಯ ಸಾಗಾಟ ತಡೆಗೆ ಜಾಗತಿಕ ಕ್ರಮ, ನಾಲ್ಕು ಉಪ ಕ್ರಮ ಪ್ರಸ್ತಾಪಿಸಿದ ಪ್ರಧಾನಿ ಮೋದಿ!

"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!

Ashes: 2 ದಿನಕ್ಕೇ Australia vs England ಮೊದಲ ಟೆಸ್ಟ್ ಮುಕ್ತಾಯ, 104 ವರ್ಷಗಳ ಬಳಿಕ ಅತ್ಯಪರೂಪದ ದಾಖಲೆ!

ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆ

ಶಾಸಕರ ಖರೀದಿ ನಡೆಯುತ್ತಿದೆ; ಆದ್ರೆ ಕಾಂಗ್ರೆಸ್‌ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ: ಪ್ರಹ್ಲಾದ್ ಜೋಶಿ

SCROLL FOR NEXT