ಬಿ.ಎಲ್ ಸಂತೋಷ್ 
ರಾಜಕೀಯ

RSS ಬಿಜೆಪಿಯ ಸೈದ್ಧಾಂತಿಕ ಅಡಿಪಾಯ: ಸುದೀರ್ಘ ಆಡಳಿತಕ್ಕೆ ವಾಜಪೇಯಿ ಬುನಾದಿ; ಬಿ.ಎಲ್ ಸಂತೋಷ್‌

ನಿಮ್ಮ ಸಂಗಾತಿಗಳು (ಸ್ಟಾಲಿನ್ ಪಿಣರಾಯಿ ವಿಜಯನ್‌ ಮಮತಾ ಬ್ಯಾನರ್ಜಿ) ಮಾಡುವ ಟ್ವೀಟ್‌ಗಳು ದೇಶದ ಜನರ ಮನಸ್ಸುಗಳನ್ನು ವಿಚಲಿತಗೊಳಿಸಲು ಆಗುವುದಿಲ್ಲ.

ಬೆಂಗಳೂರು: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಬಗ್ಗೆ ಉಲ್ಲೇಖಿಸಿದ್ದನ್ನು ಟೀಕಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಶನಿವಾರ ಟೀಕಿಸಿದ್ದಾರೆ.

ನಾನು ಸಿದ್ದರಾಮಯ್ಯ ಅವರಿಗೆ ಹೇಳಲು ಬಯಸುತ್ತೇನೆ, ಆರ್‌ಎಸ್‌ಎಸ್ ಯಾವಾಗಲೂ ಬಿಜೆಪಿಗೆ ಸೈದ್ಧಾಂತಿಕ ಮತ್ತು ಬೌದ್ಧಿಕ ಅಡಿಪಾಯವಾಗಿರುತ್ತದೆ. ಅದು ರಾಷ್ಟ್ರೀಯ ಜೀವನದ ಮುಖ್ಯವಾಹಿನಿಗೆ ಪ್ರವೇಶಿಸಿದೆ. ಹೆಚ್ಚಿನ ಜನರು ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ, ನಿಮ್ಮ ಟ್ವೀಟ್ ಜನರ ಮನಸ್ಸನ್ನು ಕದಲಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ನಡೆದ ಕಾರ್ಯಕ್ರಮದಲ್ಲಿ ಸಂತೋಷ್ ಹೇಳಿದರು.

ವಾಜಪೇಯಿ ಅವರು ಒಂದು ಜೀವನ, ಒಂದು ಧ್ಯೇಯ, ಒಂದು ನಂಬಿಕೆ ಮತ್ತು ಒಂದು ಸಿದ್ಧಾಂತದಲ್ಲಿ ನಂಬಿಕೆ ಇಡುವ ಸಂಘಟನೆಯಲ್ಲಿ 67 ವರ್ಷಗಳ ಕಾಲ ಜೀವಿಸಿದ್ದಾರೆ. ಅದಕ್ಕಾಗಿಯೇ ಅಟಲ್ ಅಥವಾ ಮೋದಿ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿಲ್ಲ ಎಂದು ಸಂತೋಷ್ ತಿಳಿಸಿದ್ದಾರೆ.

ಗಾಂಧಿ ಹತ್ಯೆ ಆರ್‌ಎಸ್‌ಎಸ್‌ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ಬಿಜೆಪಿಗೆ ವೈಚಾರಿಕ ಸೈದ್ಧಾಂತಿಕ ಮತ್ತು ಕಾರ್ಯಬದ್ಧತೆಯ ಬುನಾದಿಯಾಗಿ ಇದ್ದೇ ಇರುತ್ತದೆ. ನಿಮ್ಮ ಸಂಗಾತಿಗಳು (ಸ್ಟಾಲಿನ್ ಪಿಣರಾಯಿ ವಿಜಯನ್‌ ಮಮತಾ ಬ್ಯಾನರ್ಜಿ) ಮಾಡುವ ಟ್ವೀಟ್‌ಗಳು ದೇಶದ ಜನರ ಮನಸ್ಸುಗಳನ್ನು ವಿಚಲಿತಗೊಳಿಸಲು ಆಗುವುದಿಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ’ ಎಂದು ಬಿ.ಎಲ್‌ ಸಂತೋಷ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT