ಬಿಜೆಪಿ ಟ್ವೀಟ್ 
ರಾಜಕೀಯ

ತುಂಗಾಭದ್ರ ಅಣೆಕಟ್ಟು: ತಜ್ಞರ ವರದಿ ಕಸದ ಬುಟ್ಟಿಗೆ; ಕಾಂಗ್ರೆಸ್ ನಾಯಕರು ಗಾಢನಿದ್ರೆಗೆ!

ಈಗಾಗಲೇ ತಿಳಿದಿರುವಂತೆ ಕಳೆದ ವರ್ಷದ ಆಗಸ್ಟ್ 10ರಂದು ರಾತ್ರಿ ಅಣೆಕಟ್ಟೆ ಗರಿಷ್ಠ ಮಟ್ಟ ತಲುಪಿದ್ದಾಗ 19ನೆ ಗೇಟ್ ಕೊಚ್ಚಿಕೊಂಡು ಹೋಗಿತ್ತು.

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್‌ಗೇಟ್‌ಗಳೂ ಶಿಥಿಲಗೊಂಡಿವೆ, ಎಲ್ಲವನ್ನೂ ಬದಲಿಸಬೇಕು ಎಂಬ ತಜ್ಞರ ವರದಿಯನ್ನು ಕಡೆಗಣಿಸಿ ಗೇಟ್‌ ಬದಲಿಸದೆ ಕುಳಿತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದ್ದು, ಗೇಟ್‌ಗಳ ಮೇಲೆ ಸಿಎಂ, ಡಿಸಿಎಂ ನಿದ್ದೆ ಮಾಡುತ್ತಿರುವಂತಹ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದೆ.

ತಜ್ಞರ ವರದಿಯನ್ನು ಕಸದ ಬುಟ್ಟಿಗೆ ಎಸೆದ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಲಕ್ಷಾಂತರ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ, ಭಾರಿ ಪ್ರಮಾಣದಲ್ಲಿ ನೀರು ಇದೀಗ ಆಂಧ್ರದ ಪಾಲಾಗುತ್ತಿದೆ, ಅದನ್ನು ತಡೆಗಟ್ಟಲು ಕ್ರಮವಹಿಸಿ ಲಕ್ಷಾಂತರ ರೈತರಿಗೆ ನೀರಿನ ಭರವಸೆ ಕೊಡಿ ಎಂದು ಅದರಲ್ಲಿ ತಿಳಿಸಲಾಗಿದೆ.

ಈಗಾಗಲೇ ತಿಳಿದಿರುವಂತೆ ಕಳೆದ ವರ್ಷದ ಆಗಸ್ಟ್ 10ರಂದು ರಾತ್ರಿ ಅಣೆಕಟ್ಟೆ ಗರಿಷ್ಠ ಮಟ್ಟ ತಲುಪಿದ್ದಾಗ 19ನೆ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಬಳಿಕ ವಾರದಲ್ಲೇ ತಾತ್ಕಾಲಿಕ ಸ್ಟಾಪ್‌ಲಾಗ್ ಗೇಟ್ ಅಳವಡಿಸಿ ನೀರು ಪೋಲಾಗುವುದನ್ನು ತಡೆಯಲಾಗಿತ್ತು. ಆದರೆ ಬಳಿಕ ತಜ್ಞರು ಅಣೆಕಟ್ಟೆಯ ಕೂಲಂಕಷ ಪರೀಕ್ಷೆ ನಡೆಸಿ, 19ನೇ ಗೇಟ್‌ ಮಾತ್ರವಲ್ಲ, ಇತರ ಎಲ್ಲ 32 ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್ ಅಳವಡಿಸಬೇಕು ಎಂದು ತಿಳಿಸಿದ್ದರು. ಆದರೆ ವಿನ್ಯಾಸ ಅಂತಿಮಗೊಳಿಸುವುದು, ಟೆಂಡರ್ ಪ್ರಕ್ರಿಯೆ ವಿಳಂಬವಾಗಿ ಮತ್ತೆ ಮಳೆಗಾಲ ಆರಂಭವಾದರೂ ಗೇಟ್ ಬದಲಾವಣೆ ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT