ಛಲವಾದಿ ನಾರಾಯಣಸ್ವಾಮಿ 
ರಾಜಕೀಯ

ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ: ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ವರದಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು 2 ವರ್ಷವಾದರೂ ಆಂತರಿಕ ಮೀಸಲಾತಿಯನ್ನು ಜಾರಿಗೊಳಿಸಿಲ್ಲ.

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಆಂತರಿಕ ಮೀಸಲಾತಿ ಒದಗಿಸುವ ಗುರಿಯನ್ನು ಹೊಂದಿರುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು 'ಅವೈಜ್ಞಾನಿಕ' ಎಂದು ಕರೆದಿದ್ದಾರೆ.

ಆಯೋಗದ ವರದಿಯನ್ನು ಆಧರಿಸಿದ ಆಂತರಿಕ ಮೀಸಲಾತಿಯ ಕುರಿತು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಚರ್ಚೆಯ ವೇಳೆ ಮಾತನಾಡಿರುವ ಅವರು, ನಾಗಮೋಹನ್ ದಾಸ್ ಆಯೋಗದ ವರದಿಯು ಜಾತಿಗಳನ್ನುಎ, ಬಿ, ಸಿ, ಡಿ ಮತ್ತು ಇ ಎಂದು ಐದು ವರ್ಗಗಳಾಗಿ ವಿಂಗಡಿಸಿದೆ. ಆದಿ ಕರ್ನಾಟಕ, ಆದಿ ಆಂಧ್ರ ಮತ್ತು ಆದಿ ದ್ರಾವಿಡ ಜಾತಿಗಳಲ್ಲದಿದ್ದರೂ ಅವುಗಳನ್ನು ಜಾತಿಗಳೆಂದು ಪರಿಗಣಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಸಿ ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ ಹೆಚ್ಚಿಸಿದ್ದರು, ಎಸ್‌ಸಿಗಳನ್ನು 4 ಗುಂಪುಗಳಾಗಿ (ಎ, ಬಿ, ಸಿ ಮತ್ತು ಡಿ) ವಿಂಗಡಿಸಿದ್ದರು. ಎಸ್‌ಸಿ (ಎಡ) ಶೇ.6, ಎಸ್‌ಸಿ (ಬಲ) ಶೇ.5.5, ಸ್ಪೃಶ್ಯ ಶೇ.4.5 ಮತ್ತು ಇತರರಿಗೆ ಶೇ.1 ನೀಡಿದ್ದರು. ಆಯೋಗದ ವರದಿಯಲ್ಲಿ ಕೋಟ್ಯಂತರ ರೂಪಾಯಿಗಳನ್ನು ವ್ಯರ್ಥ ಮಾಡದೆ ಅದನ್ನು ಜಾರಿಗೆ ತರಬೇಕಿತ್ತು" ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ವರದಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು 2 ವರ್ಷವಾದರೂ ಆಂತರಿಕ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿದೆ. ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಆಂತರಿಕ ಮೀಸಲಾತಿ ನೀಡಲು ಅನುಮತಿ ನೀಡಿದ ನಂತರವೂ ಜಾರಿ ಮಾಡಿಲ್ಲ. ಹರಿಯಾಣ, ಪಂಜಾಬ್ ಮತ್ತು ಆಂಧ್ರಪ್ರದೇಶಗಳಲ್ಲಿ ಈಗಾಗಲೇ ಮೀಸಲಾತಿ ನೀಡಿದೆ.

ಅನೇಕ ಎಸ್‌ಸಿಗಳನ್ನು ಸಮೀಕ್ಷೆಯಿಂದ ಹೊರಗಿಡಲಾಗಿದೆ. ಆಯೋಗದ ಪ್ರಾಯೋಗಿಕ ದತ್ತಾಂಶವು ಸರಿಯಾಗಿಲ್ಲ. ಎಸ್‌ಸಿ ಸಮೀಕ್ಷೆಯು 'ವಂಶಾವಳಿ'ಯನ್ನು ಆಧರಿಸಿರಬೇಕು. ಎಸ್‌ಸಿ ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುದ್ಧದಲ್ಲಿ ಭಾಗಿಯಾಗದಂತೆ ಯುರೋಪಿಯನ್ ದೇಶಗಳಿಗೆ ಇರಾನ್ ಎಚ್ಚರಿಕೆ; ಲೆಬನಾನ್ ಮೇಲೆ ಇಸ್ರೇಲ್ ದಾಳಿ

'ಅವರು ಒಬ್ಬ ಅನುಭವಿ ವ್ಯಕ್ತಿ ಎಂದು ಭಾವಿಸಿದ್ದೆ': ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಟಾಂಗ್

ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, ತೀವ್ರ ಕಳವಳ!

IPL 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ

ಖಮೇನಿ ಹತ್ಯೆ ಬಗ್ಗೆ ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ; ಭಾರತದ ನಿಲುವು ಸ್ಪಷ್ಟಪಡಿಸುವಂತೆ ಆಗ್ರಹ

SCROLL FOR NEXT