ಡಿಕೆ ಶಿವಕುಮಾರ್, ವಿಜಯೇಂದ್ರ 
ರಾಜಕೀಯ

ಡಿ.ಕೆ ಶಿವಕುಮಾರ್ 'ಮಹಾನ್ ಕಲಾವಿದ'; ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿದೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ? Video

ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು: ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ 'ಆರ್‌ಎಸ್‌ಎಸ್' ಗೀತೆ ಹಾಡಿರುವುದು ವ್ಯಾಪಕ ಚರ್ಚೆ ಹಾಗೂ ಅಚ್ಚರಿಗೆ ಕಾರಣವಾಗಿದೆ.

ವಿಧಾನಸಭೆ ಕಲಾಪದ ವೇಳೆ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ.ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆ ಶಿವಕುಮಾರ್ 'ಮಹಾನ್ ಕಲಾವಿದ' ಎಂದಿದ್ದಾರೆ.

ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆ ಮಾತನಾಡುವುದರಲ್ಲಿ ಅವರು ಎಕ್ಸ ಪರ್ಟ್ ಆಗಿದ್ದಾರೆ. ಇದನ್ನು ಅವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿದೆ. ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ಆದರೆ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT