ಡಿಕೆ ಶಿವಕುಮಾರ್, ವಿಜಯೇಂದ್ರ 
ರಾಜಕೀಯ

ಡಿ.ಕೆ ಶಿವಕುಮಾರ್ 'ಮಹಾನ್ ಕಲಾವಿದ'; ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿದೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ? Video

ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು: ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ 'ಆರ್‌ಎಸ್‌ಎಸ್' ಗೀತೆ ಹಾಡಿರುವುದು ವ್ಯಾಪಕ ಚರ್ಚೆ ಹಾಗೂ ಅಚ್ಚರಿಗೆ ಕಾರಣವಾಗಿದೆ.

ವಿಧಾನಸಭೆ ಕಲಾಪದ ವೇಳೆ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ.ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆ ಶಿವಕುಮಾರ್ 'ಮಹಾನ್ ಕಲಾವಿದ' ಎಂದಿದ್ದಾರೆ.

ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆ ಮಾತನಾಡುವುದರಲ್ಲಿ ಅವರು ಎಕ್ಸ ಪರ್ಟ್ ಆಗಿದ್ದಾರೆ. ಇದನ್ನು ಅವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿದೆ. ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ಆದರೆ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT