ಬಿಕೆ ಹರಿಪ್ರಸಾದ್ 
ರಾಜಕೀಯ

'ಮಲೈ' ತಿನ್ನಲು ಕಾಂಗ್ರೆಸ್‌ನಿಂದ ಓಡಿಹೋದರು...': ರಾಹುಲ್ ಗಾಂಧಿಯನ್ನು ಟೀಕಿಸಿದ ಕಿರಣ್ ರಿಜಿಜು ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡುವಾಗಲೆಲ್ಲ ಕಾಂಗ್ರೆಸ್‌‍ ಸಂಸದರು ಮುಜುಗರಕ್ಕೊಳಗಾಗುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಶನಿವಾರ ಟೀಕಿಸಿದ್ದರು.

ನವದೆಹಲಿ: 'ರಾಹುಲ್ ಗಾಂಧಿ ಅಸಂಬದ್ಧವಾಗಿ ಮಾತನಾಡುತ್ತಾರೆ' ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹೇಳಿಕೆಯನ್ನು ಟೀಕಿಸಿದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಅವರು ಒಮ್ಮೆ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು ಎಂದು ಭಾನುವಾರ ಹೇಳಿದರು.

ಬಿಜೆಪಿಯಲ್ಲಿ 'ಮಲೈ ತಿನ್ನಲು' ರಿಜಿಜು ಕಾಂಗ್ರೆಸ್ ತೊರೆದಿದ್ದರು ಎಂದು ಹರಿಪ್ರಸಾದ್ ಹೇಳಿದರು.

'ಕಿರಣ್ ರಿಜಿಜು ಕಾಂಗ್ರೆಸ್‌ನಿಂದ 'ಮಲೈ' ತಿನ್ನಲು ಓಡಿಹೋದರು. ಕಾಂಗ್ರೆಸ್ ಅವರನ್ನು ಗುರುತಿಸದಿದ್ದರೆ, ಯಾರೂ ಅವರನ್ನು ಗುರುತಿಸುತ್ತಿರಲಿಲ್ಲ. ಅರುಣಾಚಲದಲ್ಲಿ ಚೀನಿಯರು ನಿರ್ಮಿಸಿದ ಹಳ್ಳಿಯ ಬಗ್ಗೆ ಮಾತನಾಡಲು ಅವರಿಗೆ ಹೇಳಿ' ಎಂದು ಕಾಂಗ್ರೆಸ್ ನಾಯಕ ಸುದ್ದಿಸಂಸ್ಥೆ ANI ಗೆ ತಿಳಿಸಿದರು.

ಇಂದು ಮುಂಜಾನೆ ಕಾಂಗ್ರೆಸ್ ನಾಯಕ ಹರೀಶ್ ಚೌಧರಿ, ಬಿಜೆಪಿ ಮತ ಕಳ್ಳತನದಂತಹ ಪ್ರಮುಖ ವಿಷಯಗಳಿಂದ ದೂರ ಸರಿದಿದೆ ಎಂದು ಆರೋಪಿಸಿದ ಅವರು ಕಾಂಗ್ರೆಸ್‌ನ ಆಂತರಿಕ ಪ್ರಜಾಪ್ರಭುತ್ವವನ್ನು ಒತ್ತಿ ಹೇಳಿದರು. ಪಕ್ಷದ ನಾಯಕರನ್ನು ಸಮಗ್ರ ನಾಯಕತ್ವಕ್ಕಾಗಿ ಹೊಗಳಿದರು.

ಮತ ಕಳ್ಳತನದ ಆರೋಪದ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಬಿಜೆಪಿ 'ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನದಲ್ಲಿ ತೊಡಗಿದೆ' ಎಂದು ಚೌಧರಿ ಆರೋಪಿಸಿದರು.

'ಅವರು ದಿಕ್ಕು ತಪ್ಪಿಸುವ ರಾಜಕೀಯ ಮಾಡುತ್ತಿದ್ದಾರೆ. ಇಂದು ಇಡೀ ದೇಶ ಮತ ಕಳ್ಳತನದ ಬಗ್ಗೆ ಮಾತನಾಡುತ್ತಿದೆ. ಬಿಜೆಪಿಯಲ್ಲಿ ಯಾರಿಗೂ ಯೋಚಿಸುವ ಮತ್ತು ಮಾತನಾಡುವ ಹಕ್ಕಿಲ್ಲ. ಆದರೆ, ಕಾಂಗ್ರೆಸ್‌ನಲ್ಲಿ, ಆಂತರಿಕವಾಗಿ ಯೋಚಿಸುವ ಮತ್ತು ಮಾತನಾಡುವ ಹಕ್ಕು ಎಲ್ಲರಿಗೂ ಇದೆ. ನಮ್ಮ ಖರ್ಗೆ ಜಿ ಮತ್ತು ರಾಹುಲ್ ಗಾಂಧಿ ಜಿ ಎಲ್ಲರನ್ನೂ ಕರೆದುಕೊಂಡು ಹೋಗುವ ಮೂಲಕ ಕಾಂಗ್ರೆಸ್ ಅನ್ನು ನಡೆಸುತ್ತಿದ್ದಾರೆ' ಎಂದರು.

ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡುವಾಗಲೆಲ್ಲ ಕಾಂಗ್ರೆಸ್‌‍ ಸಂಸದರು ಮುಜುಗರಕ್ಕೊಳಗಾಗುತ್ತಾರೆ ಮತ್ತು ರಾಹುಲ್‌ ತಮ್ಮ ಪಕ್ಷದ ನಾಯಕರ ಮಾತನ್ನು ಕೇಳುವುದಿಲ್ಲ. ಅದರ ಪರಿಣಾಮಗಳನ್ನು ಪಕ್ಷವು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಶನಿವಾರ ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT