ಮನ್ಸೂರ್ ಅಲಿ ಖಾನ್ - ಪಿಸಿ ಮೋಹನ್ 
ರಾಜಕೀಯ

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಕಳ್ಳತನ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ: ಮನ್ಸೂರ್ ಅಲಿ ಖಾನ್

ಒಬ್ಬ ವ್ಯಕ್ತಿಯ ಪ್ರಚಾರ ಅಥವಾ ಒಬ್ಬ ಅಭ್ಯರ್ಥಿಯ ಬಗ್ಗೆ ನಾನು ಮಾತನಾಡುತ್ತಿಲ್ಲ. ಧ್ವನಿಗಳನ್ನು ಅಳಿಸಿಹಾಕುವ ವ್ಯವಸ್ಥೆಯ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ದೇಶಕ್ಕೆ ಇಂದು ರೀತಿಯ ಪರೀಕ್ಷೆಯ ಪ್ರಕರಣವಾಗಿದೆ.

ಬೆಂಗಳೂರು: ಬೆಂಗಳೂರು ಕೇಂದ್ರ ಕ್ಷೇತ್ರದ ಮಹದೇವಪುರದಲ್ಲಿ ಮತ ಕಳ್ಳತನ ನಡೆದಿರುವುದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಚುನಾವಣೆಯಲ್ಲಿ ಪರಾಜಯಗೊಂಡ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಷ್ಟೇ ಅಲ್ಲ, ಹಲವೆಡೆ ನಡೆದಿದೆ. ತಮ್ಮ ಮತದಾನದ ಹಕ್ಕನ್ನು ಗೌರವಿಸುವ ಪ್ರತಿಯೊಬ್ಬ ಭಾರತೀಯನಿಗೂ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ಪ್ರಚಾರ ಅಥವಾ ಒಬ್ಬ ಅಭ್ಯರ್ಥಿಯ ಬಗ್ಗೆ ನಾನು ಮಾತನಾಡುತ್ತಿಲ್ಲ. ಧ್ವನಿಗಳನ್ನು ಅಳಿಸಿಹಾಕುವ ವ್ಯವಸ್ಥೆಯ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ದೇಶಕ್ಕೆ ಇಂದು ರೀತಿಯ ಪರೀಕ್ಷೆಯ ಪ್ರಕರಣವಾಗಿದೆ. ಈಗಲಾದರೂ ನಾವು ಕಾರ್ಯಪ್ರವೃತ್ತರಾಗದಿದ್ದರೆ, ಎಲ್ಲೆಡೆ ಈ ವಿಷ ಪಸರುತ್ತದೆ ಎಂದು ತಿಳಿಸಿದರು.

ಮನ್ಸೂರ್ ಅಲಿ ಖಾನ್ ಅವರು ಈ ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ #VoteChori ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ಶುರುವಾಯಿತು. ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಮನ್ಸೂರ್ ಅಲಿ ಖಾನ್ ಅವರು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT