ಕೆ.ಎನ್‌.ರಾಜಣ್ಣ 
ರಾಜಕೀಯ

'ಅವರು RSS ಗೀತೆ ಹಾಡಬಹುದು, ಶಾ ಜತೆ ವೇದಿಕೆ ಹಂಚಿಕೊಳ್ಳಬಹುದು, ಅಂಬಾನಿ ಮಗನ ಮದುವೆಗೂ ಹೋಗಬಹುದು; ನಾವು ಮಾತಾಡಿದ್ರೆ ತಪ್ಪು'; Video

ಆರೆಸ್ಸೆಸ್‌ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್‌ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ.

ತುಮಕೂರು: ಅವರು ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್‌ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್‌ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್‌ರಾಜ್‌ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್‌ ಹೋಗಿ ಪುಣ್ಯ ಸ್ನಾನ ಮಾಡಿದರು.

ಆರೆಸ್ಸೆಸ್‌ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್‌ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.

ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್‌ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ ,ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

SCROLL FOR NEXT