ಮುನಿರತ್ನ ಮತ್ತು ಕುಸುಮಾ 
ರಾಜಕೀಯ

ಹೆಣ್ಣಿಗೆ MLA ಆಗಬೇಕೆಂಬ ಹುಚ್ಚು ಹಿಡಿದರೆ ಬಿಡಿಸಲಾಗದು: ಕುಸುಮಾಗೆ ಮುನಿರತ್ನ ಟಾಂಗ್!

ಆಕೆ ಶಾಸಕಿ ಆಗಬೇಕು ಎಂದು ಒಂದೇ ಹಠ ಹಿಡಿದಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದ್ದಾರೆ.

ಬೆಂಗಳೂರು: ಒಂದು ಹೆಣ್ಣಿಗೆ ಯಾವ ಹುಚ್ಚು ಹಿಡಿದರೂ ಅದನ್ನು ಬಿಡಿಸಬಹುದು, ಆದರೆ ಎಂಎಲ್​ಎ ಆಗುವ ಹುಚ್ಚು ಹಿಡಿದರೆ ಬಿಡಿಸಲಾಗುವುದಿಲ್ಲ ಎಂದು ಶಾಸಕ ಮುನಿರತ್ನ ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಟಾಂಗ್ ನೀಡಿದ್ದಾರೆ.

ರಾಜರಾಜೇಶ್ವರಿ ನಗರದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣಿಗೆ ಯಾವ ಹುಚ್ಚು ಹಿಡಿದ್ರೂ ತಪ್ಪಿಸಬಹುದು. ಆದ್ರೆ, ಎಂ.ಎಲ್‌.ಎ ಆಗುವ ಹುಚ್ಚು ಹಿಡಿದರೆ ಅದನ್ನು ತಪ್ಪಿಸೋಕೆ ಆಗಲ್ಲ ಎಂದಿದ್ದಾರೆ. ಆಕೆ ಶಾಸಕಿ ‌ಆಗಬೇಕು ಎಂದು ಒಂದೇ ಹಠ ಹಿಡಿದಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದ್ದಾರೆ.

ಶಾಸಕಿ ಆಗಬೇಕು ಅಂದ್ರೆ ಮುನಿರತ್ನಗೆ ಹುಚ್ಚು ಹಿಡಿಯಬೇಕು. ಅದಕ್ಕೆ ಮುನಿರತ್ನನಿಗೆ ಹುಚ್ಚು ಹಿಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಯಾರ ಹಣೇಲಿ ಏನು ಬರೆದಿದೆಯೋ ಗೊತ್ತಿಲ್ಲ, ಭೂಮಿಗೆ ಬಂದವರೆಲ್ಲ ಒಂದಲ್ಲ ಒಂದು ದಿನ ಹೋಗಲೇಬೇಕು ಎಂದರು. ಅವರಿಂದಲೇ ನಾನು ಹೋಗಬೇಕು ಅಂತಿದ್ರೆ, ಯಾರೂ ತಪ್ಪಿಸೋದಕ್ಕೆ ಆಗಲ್ಲ.

ಯಾವಾಗ ಏನು ಬೇಕಿದ್ರೂ ಆಗಬಹುದು, ನಮ್ಮಿಂದ ಏನು ಮಾಡಲು ಸಾಧ್ಯವಿಲ್ಲ. ಈ ಮಧ್ಯೆ ಪೊಲೀಸರು ನನ್ನ ರಕ್ಷಣೆಗೆ ನಿಂತಿದ್ದಾರೆ, ಅವರಿಗೆ ನನ್ನ ಧನ್ಯವಾದ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ ರೂ. 1,950 ಕೋಟಿ ಬಿಡುಗಡೆಗೆ ಕೇಂದ್ರದ ಅನುಮೋದನೆ!

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ವಿಕೃತ ಮನಸ್ಥಿತಿ: ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ಜನರ ಮೇಲೆ 'ಮಲ' ಸುರಿಸುವ AI ವಿಡಿಯೋ ಹರಿಬಿಟ್ಟ Donald Trump

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

SCROLL FOR NEXT