ಬಿ.ವೈ. ವಿಜಯೇಂದ್ರ 
ರಾಜಕೀಯ

ಧರ್ಮಸ್ಥಳ ವಿಚಾರದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ YouTuber ಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ ಏಕೆ: ವಿಜಯೇಂದ್ರ ಪ್ರಶ್ನೆ

ಧರ್ಮಸ್ಥಳ ಪ್ರಕರಣದ ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು.

ಬೆಂಗಳೂರು: ಧರ್ಮಸ್ಥಳ ವಿಷಯದ ಬಗ್ಗೆ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ ಹರಡುತ್ತಿದ್ದರೂ, ರಾಜ್ಯ ಸರ್ಕಾರ ಅವರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಿಸಿಲ್ಲವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಕಾರ್ಯಕರ್ತರಾಗಿದ್ದರೆ ಸರ್ಕಾರ ಪ್ರಕರಣ ದಾಖಲಿಸಿ 24 ಗಂಟೆಗಳ ಒಳಗೆ ಅವರನ್ನು ಬಂಧಿಸುತ್ತಿತ್ತು. ಸರ್ಕಾರ ಸಮುದಾಯಗಳ ನಡುವೆ ಏಕೆ ತಾರತಮ್ಯ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ, ಕೆಲವರು ಇಡೀ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಆದರೆ, ಸರ್ಕಾರ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ತನಿಖೆಗೆ ಸಮಯ ಮಿತಿಯನ್ನು ನಿಗದಿಪಡಿಸುವ ಅವಶ್ಯಕತೆಯಿದೆ. ಎಸ್ಐಟಿ ತನಿಖೆ ಇನ್ನೆಷ್ಟು ದಿನಗಳವರೆಗೆ ನಡೆಯುತ್ತದೆ ಎಂಬುದನ್ನು ತಿಳಿಸಬೇಕು. ಇದರ ಹಿಂದಿರುವ ಜನರು ಯಾರು, ಈ ಪಿತೂರಿಗೆ ಯಾರು ಹಣ ನೀಡಿದ್ದಾರೆ, ತಪ್ಪು ಮಾಹಿತಿ ಹರಡುತ್ತಿರುವವರು ಯಾರು, ಇದನ್ನು ತನಿಖೆ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಹಿಂದೂಗಳ ಭಾವನೆಗೆ, ಪರಂಪರೆಗೆ ಧಕ್ಕೆ ತರುವ ಯಾವುದೇ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬಾರದು ಎಂದು ಹೇಳಿದ ಅವರು, ಧರ್ಮಸ್ಥಳದ ಷಡ್ಯಂತ್ರದ ಹಿಂದಿನ ಕುತಂತ್ರ ಬಯಲಿಗೆ ಎಳೆಯಲು ಎನ್ಐಎ ಅಥವಾ ಸಿಬಿಐಗೆ ಕೇಸನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಒತ್ತಿ ಮಾತನಾಡಿ, ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಬೇಕಿತ್ತು. ಆದರೆ, ಮತ್ತೊಬ್ಬ ಸಮುದಾಯದ ನಾಯಕನ ವಿರೋಧದ ನಂತರ, ಸುಹಾಸ್ ಮನೆಗೆ ಭೇಟಿ ನೀಡದೆ ವಾಪಸ್ಸಾಗಿದ್ದಾರೆ. ಈ ಮೂಲಕ ಪ್ರತಿಯೊಂದು ಸಮಯದಲ್ಲೂ ರಾಜ್ಯ ಸರ್ಕಾರ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮಾತನಾಡಿ, ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಎಸ್ಐಟಿ ಸುಮಾರು 5 ಕೋಟಿ ರೂ. ಖರ್ಚು ಮಾಡಿದೆ. ನಾವು ನಮ್ಮ ಧರ್ಮವನ್ನು ರಕ್ಷಿಸುತ್ತೇವೆ, ಸೆಪ್ಟೆಂಬರ್ 1 ರಂದು ಧರ್ಮಸ್ಥಳದಲ್ಲಿ ಹೋರಾಟ ನಡೆಸುತ್ತಿದ್ದೇವೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಆಸೀಸ್ ವಿರುದ್ಧದ 3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

SCROLL FOR NEXT