ಬಿಹಾರಕ್ಕೆ ಪ್ರತ್ಯೇಕವಾಗಿ ತೆರಳಿದ ಸಿಎಂ-ಡಿಸಿಎಂ 
ರಾಜಕೀಯ

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

ಶಿವಕುಮಾರ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಪಕ್ಷದ 11 ಶಾಸಕರನ್ನು ವಿಶೇಷ ವಿಮಾನದಲ್ಲಿ ಬಿಹಾರಕ್ಕೆ ಕರೆದೊಯ್ದರು. ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ ಎಂದು ರಾಹುಲ್ ಗಾಂಧಿಗೆ ಸಂದೇಶ ರವಾನಿಸಲು ಡಿಕೆಶಿ ಈ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಹಾರದಲ್ಲಿ ನಡೆಸುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತ್ಯೇಕ ತಂಡದಲ್ಲಿ ತೆರಳಿದ್ದು ರಾಜ್ಯ ರಾಜಕಾರಣದಲ್ಲಿ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆಯಲ್ಲಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಪಕ್ಷದ 11 ಶಾಸಕರನ್ನು ವಿಶೇಷ ವಿಮಾನದಲ್ಲಿ ಬಿಹಾರಕ್ಕೆ ಕರೆದೊಯ್ದರು. ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ ಎಂದು ರಾಹುಲ್ ಗಾಂಧಿಗೆ ಸಂದೇಶ ರವಾನಿಸಲು ಡಿಕೆಶಿ ಈ ಪ್ರಯತ್ನ ಮಾಡಿದ್ದಾರೆ ಎಂದು ಹಲವರು ಹೇಳಿದ್ದಾರೆ.

ಶಿವಕುಮಾರ್ ಭೇಟಿಯ ನಂತರ, ಸಿದ್ದರಾಮಯ್ಯ ಕೂಡ ಹಿಂದೆ ಬೀಳಲಿಲ್ಲ, ಅವರು ಕೆಜೆ ಜಾರ್ಜ್, ಡಾ. ಜಿ. ಪರಮೇಶ್ವರ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಡಾ. ಎಂ.ಸಿ. ಸುಧಾಕರ್ ಮತ್ತು ಪರಿಷತ್ತಿನಲ್ಲಿ ಪಕ್ಷದ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಸೇರಿದಂತೆ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಬಿಹಾರಕ್ಕೆ ಕರೆದೊಯ್ದರು.

ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಕೂಡ ಸಿದ್ದರಾಮಯ್ಯ ಜೊತೆಗಿದ್ದದ್ದು ಮಹತ್ವವಾಗಿದೆ, ಏಕೆಂದರೆ ಅವರು ಹಿಂದೆ ಹಲವು ಸಂದರ್ಭಗಳಲ್ಲಿ ಸಿಎಂ ಅವರನ್ನು ಟೀಕಿಸಿದ್ದರು. ಆದರೆ ಈಗ ಅವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಸಮೀಕರಣ ಬದಲಾಗಿದೆ, ಸಿದ್ದರಾಮಯ್ಯ ಪಾಳಯದಲ್ಲಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಈಗ ಶಿವಕುಮಾರ್ ಕಡೆಗೆ ಒಲವು ತೋರಿಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ಸಹಾನುಭೂತಿ ಹೊಂದಿರುವವರು ಅಧಿಕಾರ ವರ್ಗಾವಣೆಯನ್ನು ನಿರೀಕ್ಷಿಸಿ ಹಲವು ಬಾರಿ ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ನೇತೃತ್ವದ ನಿಯೋಗದಲ್ಲಿ ಅವರ ಎಂಎಲ್‌ಸಿ ಮಗ ಡಾ. ಯತೀಂದ್ರ ಕೂಡ ಇದ್ದರು. ಬಿಹಾರ ಭೇಟಿಯ ಸಂದರ್ಭದಲ್ಲಿ ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದರು.

ಶಿವಕುಮಾರ್ ಅವರನ್ನು ಪಕ್ಷದಲ್ಲಿ ಒಬ್ಬಂಟಿಯಾಗಿರಿಸಲಾಗಿದೆ ಎಂಬ ವದಂತಿಗಳಿಗೆ ಅಂತ್ಯ ಹಾಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ, "ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು. ಅವರು ರಾಜಕೀಯಕ್ಕೆ ಹೊಸಬರೇ?! ಅವರು ಸಮರ್ಥರು ಮತ್ತು ರಾಜಕೀಯ ಜ್ಞಾನ ಹೊಂದಿದ್ದಾರೆ. ಅವರು ಪ್ರತ್ಯೇಕರಾಗಿದ್ದಾರೆ ಎಂದು ಹೇಳುವುದು ಸರಿಯಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನ್ನಡ ಕಲಿಯಲು ಯತ್ನ, ಎಲ್ಲಾ ಭಾಷೆ, ಸಂಪ್ರದಾಯಗಳ ಬಗ್ಗೆ ಗೌರವ ಇದೆ: ರಾಷ್ಟ್ರಪತಿ ಮುರ್ಮು

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ, ಆದ್ರೂ ಯಾವುದೇ ಲಾಭ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

DKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ; ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?

Indian Stock Market: GDP ವರದಿ ಎಫೆಕ್ಟ್; ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಲಾಭ!

'Vote chori' ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ.. PM Modi ಮುಖ ಕೂಡ ತೋರಿಸಲಾಗಲ್ಲ: Rahul Gandhi

SCROLL FOR NEXT