ಐವಾನ್ ಡಿಸೋಜಾ ಮತ್ತು ಮಿಥುನ್ ರೈ 
ರಾಜಕೀಯ

ನಾಯಕರ ಪರ ಘೋಷಣೆ: ಮಿಥುನ್ ರೈ-ಐವಾನ್ ಡಿ'ಸೋಜಾಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್‌

ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರು.

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕಳೆದ ಕೆಲ ತಿಂಗಳಿಂದ ಸಿಎಂ ಗದ್ದುಗೆ ಗುದ್ದಾಟ ಮಿತಿಮೀರಿದೆ. ಸಿಎಂ-ಡಿಸಿಎಂ ಬ್ರೇಕ್‌ ಫಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಘೋಷಣೆ ಕೂಗಿದ್ದವರಿಗೆ ಐಐಸಿಸಿ ಶಾಕ್ ನೀಡಿದೆ.

ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ.ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು.

ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರು. ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಲ್ಲದೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದ್ರು. ಸಿಎಂ-ಡಿಕೆಶಿ ನಡುವಿನ ಕುರ್ಚಿ ಕದನ ಶಾಂತವಾಗಿರುವಾಗಲೇ ಈ ರೀತಿ ಘೋಷಣೆ ಕೂಗಿರುವುದು ಹೈಕಮಾಂಡ್​ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಕಾರಣ ಕೇಳಿ ಮಿಥುನ್ ರೈಗೆ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಶೋಕಾಸ್ ನೋಟಿಸ್‌ ಜಾರಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಘೋಷಿಸಿದ್ದ ಪರಿಷತ್‌ ಸದಸ್ಯ ಐವಾನ್ ಡಿಸೋಜಾಗೂ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಸೂಕ್ತ ಕಾರಣ ನೀಡುವಂತೆ ಕಾಂಗ್ರೆಸ್ ನೋಟಿಸ್ ನೀಡಿದೆ. ಈ ಮೂಲಕ ಕೈನಲ್ಲಿ ಮತ್ತೆ ಸಿಎಂ ಕುರ್ಚಿಯ ಕಿತ್ತಾಟ ಹೆಚ್ಚಾಗದಂತೆ ಕ್ರಮಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಣಿಪುರ: ಶಾಂತಿಗೆ ಮತ್ತೆ ಭಂಗ, ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video

ಧಾರ್‌- ಭೋಜ್‌ಶಾಲಾ ವಿವಾದ: ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ 'ಸುಪ್ರೀಂ' ಅವಕಾಶ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

SCROLL FOR NEXT