ಆರ್. ಅಶೋಕ್ 
ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಜಗಳ ಉತ್ತುಂಗದಲ್ಲಿದ್ದಾಗ, ವಿರೋಧ ಪಕ್ಷವು ಇತ್ತೀಚೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸುಳಿವು ನೀಡಿತ್ತು.

ಬೆಂಗಳೂರು: ಮುಂಬರುವ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ-ಜೆಡಿ(ಎಸ್) ಸಮನ್ವಯ ಸಮಿತಿಯಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಜಗಳ ಉತ್ತುಂಗದಲ್ಲಿದ್ದಾಗ, ವಿರೋಧ ಪಕ್ಷವು ಇತ್ತೀಚೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸುಳಿವು ನೀಡಿತ್ತು.

ಅಧಿವೇಶನದ ಆರಂಭದಲ್ಲಿಯೇ ಎತ್ತಲಾಗುವ ಪ್ರಮುಖ ವಿಷಯಗಳಲ್ಲಿ ಉತ್ತರ ಕರ್ನಾಟಕದ ವಿಷಯಗಳು ಸೇರಿವೆ ಎಂದು ಬಿಜೆಪಿಯ ಹಿರಿಯ ನಾಯಕ ತಿಳಿಸಿದ್ದಾರೆ.

ವಿಧಾನಸಭೆಯ ಚಳಿಗಾಲದ ಅಧಿವೇಶನವು ಡಿಸೆಂಬರ್ 8-19 ರಂದು ಬೆಳಗಾವಿಯಲ್ಲಿ ನಡೆಯಲಿದೆ.

"ಬಿಜೆಪಿ-ಜೆಡಿ(ಎಸ್) ಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಕೆಲವು ಸಲಹೆಗಳು ಬಂದಿವೆ. ಎರಡೂ ಪಕ್ಷಗಳ ಸಮನ್ವಯ ಸಮಿತಿ ಸಭೆಯಲ್ಲಿ ಇದನ್ನು ನಿರ್ಧರಿಸಬೇಕಾಗಿದೆ, ಆದರೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಅಶೋಕ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚಿಸಬೇಕು. ಆದರೆ ಸರ್ಕಾರ ಸಾಮಾನ್ಯವಾಗಿ ಅವುಗಳನ್ನು ಕೊನೆಯ ದಿನದಂದು ಕೈಗೆತ್ತಿಕೊಳ್ಳುತ್ತದೆ ಮತ್ತು ಯಾವುದೇ ಉತ್ತರವನ್ನು ನೀಡದೆ ತಪ್ಪಿಸಿಕೊಳ್ಳುತ್ತದೆ ಎಂದರು.

"ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಅಧಿವೇಶನದ ಆರಂಭದಲ್ಲಿಯೇ ಕೈಗೆತ್ತಿಕೊಂಡು ಚರ್ಚಿಸಬೇಕು ಮತ್ತು ಉತ್ತರ ನೀಡಬೇಕು ಎಂದು ಒತ್ತಾಯಿಸಿ ನಾನು ನಿಲುವಳಿ ಸೂಚನೆ ನಿರ್ಣಯ ಮಂಡಿಸುತ್ತೇನೆ". ಇದನ್ನು ಮಾಡದಿದ್ದರೆ ಈ ಪ್ರದೇಶದ ಜನರಿಗೆ ಅನ್ಯಾಯವಾಗುತ್ತದೆ ಮತ್ತು ಅಲ್ಲಿ ಅಧಿವೇಶನ ನಡೆಸುವುದು ವ್ಯರ್ಥ ಎಂದರು.

ವಿರೋಧ ಪಕ್ಷವನ್ನು ಎದುರಿಸಲು ಸಾಧ್ಯವಾಗದೆ, ಸರ್ಕಾರವು ಕಾರ್ಯತಂತ್ರ ರೂಪಿಸಲು ಸರಣಿ ಸಭೆಗಳನ್ನು ನಡೆಸುತ್ತಿದೆ. ಏಕೆಂದರೆ ಸರ್ಕಾರ ಮತ್ತು ಆಡಳಿತ ಪಕ್ಷದೊಳಗೆ ಗೊಂದಲವಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ