ಬಿಜೆಪಿ (ಸಂಗ್ರಹ ಚಿತ್ರ) online desk
ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತ ಕೊಲೆ​​ ಕೇಸ್'ನಲ್ಲಿ ಬಜರಂಗದಳ ಕಾರ್ಯಕರ್ತನ ಬಂಧನ: ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ BJPಗರೇ ಈಗೇನು ಹೇಳುತ್ತೀರಿ..?

ಸಂಘ ಪಾರಿವಾರದ ಭಯೋತ್ಪಾದಕ ಮುಖಗಳು ಬಯಲಾಗುತ್ತಿವೆ. ಶಾಖೆಯಲ್ಲಿ ಇಂತಹ ಪಾತಕ ಪಾಠಗಳನ್ನು ಹೇಳಿಕೊಡುವುದೇ ಸಂಘ ಪರಿವಾರದ ಸಂಸ್ಕಾರವೇ?

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಕೊಲೆ​​ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆಯವರು, ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ ಬಿಜೆಪಿ ನಾಯಕರು ಸಮಾಜದ ಸಾಮರಸ್ಯ ಕದಡುವ ಈ ಕುಕೃತ್ಯದ ಬಗ್ಗೆ ನೀಡುವ ಉತ್ತರವೇನು? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಸದಸ್ಯರೊಂದಿಗೆ ನಾನೂ ಸಮಾನ ದುಃಖಿತನಾಗಿದ್ದೇನೆಂದು ಹೇಳಿದ್ದಾರೆ.

ಸಂಘ ಪಾರಿವಾರದ ಭಯೋತ್ಪಾದಕ ಮುಖಗಳು ಬಯಲಾಗುತ್ತಿವೆ. ನಮ್ಮ ಸರ್ಕಾರವು ಕೊಲೆಗಡುಕರಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ಮೂಲಕ ಗಣೇಶ್ ಅವರ ಸಾವಿಗೆ ನ್ಯಾಯ ದೊರಕಿಸಿಕೊಡಲಿದೆ. ಶಾಖೆಯಲ್ಲಿ ಇಂತಹ ಪಾತಕ ಪಾಠಗಳನ್ನು ಹೇಳಿಕೊಡುವುದೇ ಸಂಘ ಪರಿವಾರದ ಸಂಸ್ಕಾರವೇ?

ಸಂಗ್ರಹವಾಗುವ ಗುರುದಕ್ಷಿಣೆಯು ಇಂತಹ ಕುಕೃತ್ಯಗಳಿಗೆ ಬಳಕೆಯಾಗುತ್ತಿದೆಯೇ? ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ ಬಿಜೆಪಿ ನಾಯಕರು ಸಮಾಜದ ಸಾಮರಸ್ಯ ಕದಡುವ ಈ ಕುಕೃತ್ಯದ ಬಗ್ಗೆ ನೀಡುವ ಉತ್ತರವೇನು? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪವಾಗಿದೆ, ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ-Video

Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ: ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆ

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

SCROLL FOR NEXT