ಡಿಕೆ ಶಿವಕುಮಾರ್ 
ರಾಜಕೀಯ

'₹500 ಕೋಟಿ ಕೊಟ್ಟರೆ ಸಿಎಂ ಹುದ್ದೆ': ನವಜೋತ್ ಕೌರ್ ಸಿಧು 'ಮೆಂಟಲ್ ಆಸ್ಪತ್ರೆಗೆ' ದಾಖಲಾಗಬೇಕು; ಡಿ.ಕೆ ಶಿವಕುಮಾರ್

2027ರ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದರು.

ಬೆಂಗಳೂರು: 'ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂ. ನೀಡಬೇಕು' ಎಂಬ ಹೇಳಿಕೆಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಅವರಿಗೆ ಸಲಹೆ ನೀಡಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರು ಶನಿವಾರ, '500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ' ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಕಾಂಗ್ರೆಸ್ ಕಾರ್ಯವೈಖರಿಯ ಬಗ್ಗೆ ಬಿಜೆಪಿ ಮತ್ತು ಎಎಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, 'ಅವರು ಆಸ್ಪತ್ರೆಗೆ ದಾಖಲಾಗಲಿ, ಯಾವುದಾದರೂ ಒಳ್ಳೆಯ ಮಾನಸಿಕ ಆಸ್ಪತ್ರೆಗೆ ಸೇರಿಕೊಳ್ಳಲಿ' ಎಂದು ಹೇಳಿದರು.

2027ರ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದರು.

ಯಾವುದೇ ಪಕ್ಷಕ್ಕೆ ದಾನ ಮಾಡಲು ಅವರ ಬಳಿ ಹಣವಿಲ್ಲ. ಆದರೆ, ಪಂಜಾಬ್ ಅನ್ನು 'ಸುವರ್ಣ ರಾಜ್ಯ'ವನ್ನಾಗಿ ಪರಿವರ್ತಿಸಬಹುದು. ನಾವು ಯಾವಾಗಲೂ ಪಂಜಾಬ್ ಮತ್ತು ಪಂಜಾಬಿಯತ್‌ಗಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ನೀಡಬಹುದಾದ 500 ಕೋಟಿ ರೂ. ನಮ್ಮ ಬಳಿ ಇಲ್ಲ' ಎಂದು ಹೇಳಿದ್ದರು.

ಯಾರಾದರೂ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಯೇ ಎಂದು ಕೇಳಿದಾಗ, ಯಾರೂ ಅದನ್ನು ಬೇಡಿಕೆ ಇಟ್ಟಿಲ್ಲ, ಆದರೆ 500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿಯಾಗಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು