ಸಿದ್ದರಾಮಯ್ಯ-ಡಾ ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಸಿಎಂ ಹುದ್ದೆ ಹೇಳಿಕೆ: ಪುತ್ರ ಯತೀಂದ್ರಗೆ ಸಿದ್ದರಾಮಯ್ಯ ವಾರ್ನಿಂಗ್

ಮೇಲ್ಮನೆ ಸದಸ್ಯ ಡಾ. ಯತೀಂದ್ರ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿಲ್ಲ ಎಂದಿದ್ದಾರೆ.

ಬೆಳಗಾವಿ: ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿದು ಕುರ್ಚಿ ಕದನ ತಣ್ಣಗಾಯಿತು ಎಂದು ಅಂದುಕೊಂಡಿರುವಾಗಲೇ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ನೀಡಿರುವ ಹೇಳಿಕೆ ಮತ್ತೆ ರಾಜ್ಯ ರಾಜಕೀಯದಲ್ಲಿ ಬೆಳಗಾವಿ ಅಧಿವೇಶನ ಮಧ್ಯೆ ಸಂಚಲನ ಮೂಡಿಸಿದೆ.

ಮೇಲ್ಮನೆ ಸದಸ್ಯ ಡಾ. ಯತೀಂದ್ರ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿಲ್ಲ ಎಂದಿದ್ದಾರೆ. ಇದಕ್ಕೆ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರು ಸೇರಿದಂತೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

ಇತ್ತ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಕರೆದು ಬುದ್ದಿ ಹೇಳುವ ಕೆಲಸ ಮಾಡಿದ್ದಾರೆ. ನಿನ್ನೆ ಬೆಳಗಾವಿಯ ಸರ್ಕಿಟ್‌ ಹೌಸ್‌ಗೆ ಪುತ್ರನನ್ನು ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಸುಮಾರು 1 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಪದೇ ಪದೇ ಈ ರೀತಿ ಮಾತನಾಡದಂತೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಏನಿದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತೆ, ನೀನು ಮಾತನಾಡುವುದು ಬೇಡ. ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ಇದೆ. ಯಾರೂ ಮಾತನಾಡುತ್ತಿಲ್ಲ ನೀನೊಬ್ಬನೇ ಮಾತನಾಡಿದರೆ ಬೇರೆ ಸಂದೇಶ ಹೋಗುತ್ತೆ. ಅಧಿವೇಶನ ಸಮಯದಲ್ಲಿ ಅನಗತ್ಯ ಗೊಂದಲ ಆಗುವುದು ಬೇಡ ಎಂದು ಸಿಎಂ ಕಿವಿಮಾತು ಹೇಳಿರುವುದಾಗಿ ಆಪ್ತಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

Cricket Wedding: ಬಾಲ್ಯದ ಗೆಳತಿ ವಂಶಿಕಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ Kuldeep Yadav!

IPL ಫ್ರಾಂಚೈಸಿ ಕಾವ್ಯಾ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ Pak ಬೌಲರ್ ಅಬ್ರಾರ್‌ಗೆ ಸಂಕಷ್ಟ, ಹಣನಾ-ರಾಷ್ಟ್ರನಾ; ಅತಂತ್ರ ಸ್ಥಿತಿಯಲ್ಲಿ PCB!

ಒಂದು ರೂಪಾಯಿಗೆ ಒಂದು ಲೀಟರ್ ಹಾಲು!: ಬಮುಲ್ ಅಧ್ಯಕ್ಷ DK Suresh ಹೇಳಿದ್ದೇನು?

Cricket: ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ, ICC ಕ್ರಮ .. ಡಿಮೆರಿಟ್ ಪಾಯಿಂಟ್!

SCROLL FOR NEXT