ಕೆಎನ್ ರಾಜಣ್ಣ, ಡಿಕೆ ಶಿವಕುಮಾರ್ 
ರಾಜಕೀಯ

ಡಿ.ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ: ರಾಜಣ್ಣ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು.

ಡಿಕೆ ಶಿವಕುಮಾರ್ ಭೇಟಿ ಮಾಡಿದ್ದರು. ಅವರೇನು ಹುಡುಕಿಕೊಂಡು ಬಂದಿರಲಿಲ್ಲ. ಅವರು ಪಾರ್ಟಿ ಅಧ್ಯಕ್ಷರು ಮಾತನಾಡುತ್ತಾರೆ. ಯಾರನ್ನೂ ಬೇಕಾದರೂ ಮಾತಾಡಿಸಬಹುದು. ಪಕ್ಷ ಸಂಘಟನೆ ವಿಚಾರವಾಗಿ ಭೇಟಿ ಮಾಡಿದ್ದರು. ಪಕ್ಷ ಸಂಘಟನೆ ಮಾಡೋಣ ಎಂದರು, ನಾನು ಆಯಿತು ಅಂದೆ. ಅದರ ಹೊರತಾಗಿ ಬೇರೆ ಯಾವುದೇ ವಿಚಾರಗಳು ಚರ್ಚೆ ಆಗಿಲ್ಲ ಎಂದು ಹೇಳಿದರು.

ನಮ್ಮ ನಿಲುವು ಸಿದ್ದರಾಮಯ್ಯ ಪರವಾಗಿಯೇ ಇದೆ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮನೆಗೆ ಎಲ್ಲರೂ ಊಟಕ್ಕೆ ಹೋಗಿದ್ದರು. ಅದು ರಾಜಕೀಯ ಅಲ್ಲ. ಅದೊಂದು ಸೌಜನ್ಯಕ್ಕೆ ಅಷ್ಟೆ. ಸಿಎಂ ವಿಚಾರವನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಸಿಎಂ ಕೂಡ ನಾನೇ 5 ವರ್ಷ ಇರ್ತೀನಿ ಅಂತ ಪದೇ ಪದೇ ಹೇಳಿದ್ದಾರೆ. ಹೈಕಮಾಂಡ್ ಹೇಳುವವರೆಗೆ ನಾನು ಕಾಯುತ್ತೇನೆಂದು ತಿಳಿಸಿದರು.

ನಾನು ಈ ಹಿಂದೆ ನೀಡಿದ ಹೇಳಿಕೆಗಳಿಗೆ ಈಗಲೂ ಬದ್ಧ. ನಾನು ಸಿದ್ದರಾಮಯ್ಯ ಪರವೇ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿ.ಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ನಾನು ಬದ್ಧ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ ಪ್ರತಿಪಕ್ಷಗಳು; 100 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ- ಕಾಂಗ್ರೆಸ್

ಬ್ಯಾಟ್‌ನಲ್ಲಿ ರಬ್ಬರ್ ಇದೆ: Indian ಬ್ಯಾಟರ್ ಅಭಿಷೇಕ್ ಶರ್ಮಾ ವಿರುದ್ಧ ಶ್ರೀಲಂಕಾ ಬ್ಯಾಟರ್‌ನಿಂದ ಬ್ಯಾಟ್ ಟ್ಯಾಂಪರಿಂಗ್ ಆರೋಪ!

ಬಾಯಿ ಮುಚ್ಚಿಕೊಂಡು ಇರಬೇಕೆಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು; ನಾನು-ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿ.ಕೆ ಶಿವಕುಮಾರ್; Video

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿ

ನೀವು ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರೋ ಎಂಎಂ ನರವಾಣೆ ಅವರನ್ನು ನಂಬುತ್ತೀರೋ?: ವರದಿಗಾರರಿಗೆ ರಾಹುಲ್ ಗಾಂಧಿ ಪ್ರಶ್ನೆ

SCROLL FOR NEXT