ಕಾಂಗ್ರೆಸ್​​ ಎಂಎಲ್​​ಸಿ ಕೆ.ಎನ್.ರಾಜೇಂದ್ರ 
ರಾಜಕೀಯ

ಡಿಕೆ.ಶಿವಕುಮಾರ್-ಕೆ.ಎನ್.ರಾಜಣ್ಣ ಭೇಟಿ: ರಹಸ್ಯ ಬಿಚ್ಚಿಟ್ಟ ಪುತ್ರ ಕೆ.ಎನ್.ರಾಜೇಂದ್ರ..!

ಸಿಎಂ ಬದಲಾವಣೆ ವಿಚಾರದಲ್ಲಿ ರಾಜಣ್ಣ ಅವರ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯನವರ ಪರ ಗಟ್ಟಿಯಾಗಿ ನಿಂತಿದ್ದಾರೆ. ತಮ್ಮ ಹಿಂದಿನ ಮಾತಿಗೆ ಬದ್ಧರಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳನ್ನು ಹುಟ್ಟುಹಾಕಿದ್ದು, ಈ ನಡುವಲ್ಲೇ ಈ ಭೇಟಿ ಕುರಿತು ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್​​ ಎಂಎಲ್​​ಸಿ ಕೆ.ಎನ್.ರಾಜೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಆಗಿರುವ ಡಿ.ಕೆ. ಶಿವಕುಮಾರ್ ಪಕ್ಷದ ಸದಸ್ಯರಾದ ರಾಜಣ್ಣ ಅವರನ್ನು ಭೇಟಿಯಾಗುವುದು ಸಹಜ. ಯಾವುದೇ ಪ್ರಮುಖ ವಿಚಾರಗಳಿದ್ದಾಗ ಈ ರೀತಿಯ ಭೇಟಿಗಳು ನಡೆಯಬಹುದು. ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ತನಗೆ ಮಾಹಿತಿ ಇಲ್ಲ, ಏಕೆಂದರೆ ಇದು ಖಾಸಗಿ ಭೇಟಿ ಎಂದು ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರದಲ್ಲಿ ರಾಜಣ್ಣ ಅವರ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯನವರ ಪರ ಗಟ್ಟಿಯಾಗಿ ನಿಂತಿದ್ದಾರೆ. ತಮ್ಮ ಹಿಂದಿನ ಮಾತಿಗೆ ಬದ್ಧರಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಅವರಂತಹ ಸಿದ್ದರಾಮಯ್ಯ ಆಪ್ತರನ್ನು ಭೇಟಿಯಾಗುವುದು ಪಕ್ಷದ ಅಧ್ಯಕ್ಷರಾಗಿ ಸಹಜವಾದ ಪ್ರಕ್ರಿಯೆ. ಅದಕ್ಕೆ ಅತಿಯಾದ ಮಹತ್ವ ನೀಡುವ ಅಗತ್ಯವಿಲ್ಲ. ಇದು ವಿಶ್ವಾಸ ಗಳಿಸುವ ಪ್ರಯತ್ನದ ಭಾಗವಲ್ಲ, ಬದಲಾಗಿ ಸಾಮಾನ್ಯ ರಾಜಕೀಯ ಮಾತುಕತೆ ಎಂದು ತಿಳಿಸಿದರು.

ಇದೇ ವೇಳೆ, ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಜನತೆ ತೀರ್ಮಾನಿಸುತ್ತಾರೆ. ಅದರ ಬಳಿಕ ಪಕ್ಷವು ಅವರಿಗೆ ಹುದ್ದೆಗಳು ಮತ್ತು ಜವಾಬ್ದಾರಿಗಳನ್ನು ನೀಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!

ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..': ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!

ಚಿಕ್ಕಬಳ್ಳಾಪುರ ಬೆಳ್ಳಿ ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು, ಚಿನ್ನಕ್ಕೂ ಸ್ಕೆಚ್ ಹಾಕಿದ್ದರು!

ದೆಹಲಿಯಲ್ಲಿ 2 ದಿನ ಇದ್ದಿದ್ದಕ್ಕೆ ಸೋಂಕು ತಗುಲಿದೆ: ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ? ನಿತಿನ್ ಗಡ್ಕರಿ

SCROLL FOR NEXT