ಹೆಚ್ ಡಿ ದೇವೇಗೌಡ 
ರಾಜಕೀಯ

ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ: ಹೆಚ್.ಡಿ ದೇವೇಗೌಡ

ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲಾ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಇದೀಗ ಯೂಟರ್ನ್ ಹೊಡೆದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮೈತ್ರಿ ಮುಂದುವರಿಸುವುದು ಕಷ್ಟ ಎಂದು ಹೇಳಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಮೈತ್ರಿ ಕಷ್ಟಕರವಾಗಿರುತ್ತದೆ ಎಂದರು.

ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು. ಕೆಲವು ಸ್ಥಳಗಳಲ್ಲಿ ನಾವು ಸ್ವಂತವಾಗಿ ಹೋರಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ದೇವೇಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲು ಸಾಧ್ಯವೇ, ಬಿಜೆಪಿ ರಾಜ್ಯ ಅಧ್ಯಕ್ಷರು ಈ ವಿಷಯದ ಬಗ್ಗೆ ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದರು.

ರಾಜ್ಯದಲ್ಲಿ ತಕ್ಷಣ ಚುನಾವಣೆ ನಡೆದರೆ ಬಿಜೆಪಿ ಏಕಾಂಗಿಯಾಗಿ 130-140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಜಯೇಂದ್ರ ಇತ್ತೀಚೆಗೆ ಹೇಳಿದ್ದರು. ಮೂಲಗಳ ಪ್ರಕಾರ, ಈ ಹೇಳಿಕೆ ಜೆಡಿಎಸ್ ನಾಯಕರಿಗೆ ಅಸಮಾಧಾನ ತಂದಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ