ಶಾಸಕ ಬಿಆರ್ ಪಾಟೀಲ್ 
ರಾಜಕೀಯ

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿಆರ್ ಪಾಟೀಲ್ ರಾಜೀನಾಮೆ

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್​ ಅವರು ಶನಿವಾರ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಆರ್ ಪಾಟೀಲ್ ಅವರ ದಿಢೀರ್ ರಾಜೀನಾಮೆ ಕಾಂಗ್ರೆಸ್​​ನಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಆದರೆ ರಾಜೀನಾಮೆಗೆ ಕಾರಣ ಏನು ಎಂಬ ಪ್ರಶ್ನೆಗೆ, ನಾನಾಗಿಯೇ ತನ್ನ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ಬಿಆರ್ ಪಾಟೀಲ್ ಅವರ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ. ಏಕಾಏಕಿ ರಾಜೀನಾಮೆ ಏಕೆ ನೀಡಿದ್ದಾರೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ಆರ್​​ವಿ ದೇಶಪಾಂಡೆ, ಬಸವರಾಜ್ ರಾಯರೆಡ್ಡಿ ಹಾಗೂ ಬಿಆರ್ ಪಾಟೀಲ್​ ಸಹ ಬೇಸರಗೊಂಡಿದ್ದರು. ಹೀಗಾಗಿ ಬಂಡಾಯ ಎದ್ದಿದ್ದ ಶಾಸಕರಿಗೆ ವಿಶೇಷ ಹುದ್ದೆಗಳ ಸ್ಥಾನ ಮಾನ ನೀಡಲಾಗಿತ್ತು. ಬಸವರಾಜ ರಾಯರೆಡ್ಡಿ ಅವರಿಗೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆ, ಬಿಆರ್‌ ಪಾಟೀಲ್‌ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಹಾಗೇ ಆರ್‌ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು, ಆದರೆ, ಇದೀಗ ಬಿಆರ್ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT