ಬಿಜೆಪಿ ಟ್ವೀಟ್ 
ರಾಜಕೀಯ

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ- BJP ವಂಗ್ಯ

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು.

ಬೆಂಗಳೂರು: ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್‌ ಮೇಧಾವಿಗಳಾದ ಶಿಕ್ಷಣ ಸಚಿವ, ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು. ಬಳಿಕ ಬೆಂಬಲಿಗರ ಸಹಾಯದೊಂದಿಗೆ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ.

ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್‌ ಮೇಧಾವಿಗಳಾದ ಶಿಕ್ಷಣ ಸಚಿವ, ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ವ್ಯಂಗ್ಯವಾಡಿದೆ.

ಕೆ.ಪಿ.ಎ.ಸ್ಸಿ ಪ್ರಶ್ನೆ ಪತ್ರಿಗಳಲ್ಲೂ ಪದೇ ಪದೆ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸುವುದು. ಕನ್ನಡ ಶಾಲೆಗಳನ್ನು ಮುಚ್ಚಿಸುತ್ತಿರುವುದು ಈ ಎಲ್ಲವನ್ನೂ ನೋಡಿದರೆ ಕರುನಾಡಲ್ಲಿ ಕನ್ನಡವನ್ನು ಅಳಿಸಿ ಹಾಕಬೇಕೆಂದು ಕಾಂಗ್ರೆಸ್‌ ಹೊರಟಿದೆ ಎಂದೂ ಕಿಡಿಕಾರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT